ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ: ಪ್ರೀಯಕನಿಂದಲ್ಲೇ ಸುಟ್ಟು ಹಾಕಿ ಕೊಲೆ

1
845

ಕಲಬುರಗಿ: ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಕಲಬುರ್ಗಿ ಜಿಲ್ಲೆಯ ಗಡಿ ಭಾಗದ ಹೊಂದಿಕೊಂಡು ಪರಗಿ ಬಳಿ ನಡೆದಿದೆ.

ಕೊಲೆಯಾದ ವಿದ್ಯಾರ್ಥಿನಿಯನ್ನು ಕಲುಬುರ್ಗಿಯ ಸೀಬಾ ರಾಣಿ ಎಂದು ಗುರುತಿಸಲಾಗಿದೆ. ಐಡಿಯಲ್ ಫೈನ್ ಆರ್ಟ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆಯನ್ನು ರಾಜಾಪುರದ ರವಿ ಪೂಜಾರಿ, ಪ್ರೀತಿಸಿದಂತೆ ನಾಟಕವಾಡಿ, ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ್ದ ಎನ್ನಲಾಗಿದೆ. ಗರ್ಭಪಾತ ಮಾಡಿಸಲೆಂದು ಹೋದಾಗ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಆಕೆಯನ್ನು ಸುಟ್ಟು ಹಾಕಲಾಗಿದೆ.

Contact Your\'s Advertisement; 9902492681

ಪ್ರೀತಿಸಿದ ಯುವಕನೇ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸುವ ನೆಪದಲ್ಲಿ ಕೊಲೆಗೈದು ವಿದ್ಯಾರ್ಥಿನಿಯನ್ನು ಸುಟ್ಟು ಹಾಕಿದ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಐಡಿಯಲ್ ಫೈನ್ ಆರ್ಟ್ ಕಾಲೇಜಿನ ಸೀಬಾ ರಾಣಿ ಎಂದು ಗುರುತಿಸಲಾಗಿದೆ. ಕಲಬುರ್ಗಿಯ ಕುವೆಂಪು ನಗರಲ್ಲಿ ವಾಸಿಸುತ್ತಿದ್ದ ಸೀಬಾ ರಾಣಿಯನ್ನು, ರಾಜಾಪುರದ ಯುವಕ ರವಿ ಪೂಜಾರಿ ಎಂಬಾತ ಪ್ರೀತಿಸುವುದಾಗಿ ನಂಬಿಸಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದಾನೆ. ಗರ್ಭಪಾತ ಮಾಡಿಸಲೆಂದು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಿದ್ದ. ಈ ವೇಳೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದರಿಂದ, ಆಕೆಯ ಶವವನ್ನು ಕಾರಿನಲ್ಲಿ 37 ಗಂಟೆಗಳ ಕಾಲ ಸುತ್ತಿಸಿ,ಅದನ್ನು ತೆಲಂಗಾಣ ಗಡಿಯಲ್ಲಿ ಸುಟ್ಟು ಹಾಕಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.

ಹಿನ್ನೆಲೆ: ಕಾಲೇಜಿಗೆ ಹೋಗಿದ್ದ ಸೀಬಾ ರಾಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಕಿಡ್ನ್ಯಾಪ್ ಆಗಿರಬೇಕೆಂದು ಪೋಷಕರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ಆಕೆಯ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆವಿ ಡೋಸ್ ಇಂಜೆಕ್ಷನ್ ಕೊಡಿಸಿದ್ರಿಂದ ಸೀಬಾ ರಾಣಿ ಸಾವನ್ನಪ್ಪಿದ್ದಾಳೆ. ಇದಕ್ಕೆ ಕಾರಣರಾದ ಯುವಕ, ವೈದ್ಯರು, ಆಸ್ಪತ್ರೆ ಸಿಬ್ಬಂದಿ ಎಲ್ಲರ ವಿರುದ್ದವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಗಳು ಆಗ್ರಹಿಸಿದ್ದಾರೆ.

ಪೊಲೀಸರ ಕಾರ್ಯಾಚರಣೆ: ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಪುರ ಪೊಲೀಸರು ರವಿ ಪೂಜಾರಿ ಎಂಬ ಯುವಕನನ್ನು ಬಂಧಿಸಿದ್ದಾರೆ. ಬಂಧಿಸಿದ ನಂತರ ಗರ್ಭಪಾತದ ವೇಳೆ ಸಾವನ್ನಪ್ಪಿದ ಮತ್ತು ಶವವನ್ನು ಕಾರಿನಲ್ಲಿ ಹಾಕಿಕೊಂಡು ತೆಲಂಗಾಣ ಗಡಿಯಲ್ಲಿ ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿರೋದಾಗಿ ಆರೋಪಿ ಮಾಹಿತಿ ನೀಡಿದ್ದಾನೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಮತ್ತಷ್ಟು ಜನರ ಬಂಧನವಾಗೋ ಸಾಧ್ಯತೆಯಿದೆ. ಅತ್ತ ಕಡೆ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಪ್ರೀತಿಸಿದವನಿಂದ ಮೋಸಹೋದ ಯುವತಿ, ಸುಟ್ಟು ಬೂದಿಯಾಗಿದ್ದು, ಸುದ್ದಿ ತಿಳಿದ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟುವಂತೆ ಮಾಡಿತ್ತು. ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.‌

1 ಕಾಮೆಂಟ್

  1. ಇ ಮೀಡಿಯಾ ಒಳ್ಳೆಯ ಸುದ್ದಿಗಳನ್ನು ಪ್ರಚಾರ ಮತ್ತು ಪ್ರಸಾರ ಮಾಡುತ್ತಿದೆ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡಿ ನೊಂದವರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಇ ಮೀಡಿಯಾಗೆ ಅಭಿನಂದನೆಗಳು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here