ವಾರ್ತಾ ಭವನದಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಕೆ

0
12

ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ವಿಧಾನಸೌಧ ಅವರಣದಲ್ಲಿರುವ ವಾರ್ತಾ ಭವನದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಮಾಡಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳಾದ ಡಿ.ಕೆ.ರಾಜರತ್ನ, ಉಮಾಶಂಕರ‌ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಶಾ, ದೇವಿಂದ್ರ, ಲಕ್ಷ್ಮೀಬಾಯಿ, ನರಸಿಂಹ, ಅಶೋಕ, ಅಪ್ರೆಂಟಿಸ್ ಅಭ್ಯರ್ಥಿಗಳಾದ ಸುನೀಲ, ಅಂಬಿಕಾ, ಭಾಗ್ಯಶ್ರೀ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here