ಕಲಬುರಗಿ ವಿಭಾಗದಪಟ್ಟಣ ಸಹಕಾರ ಬ್ಯಾಂಕ್ ಅಧಿಕಾರಗಳ ತರಬೇತಿ

  • ಕಾನೂನು ನಿಯಮಗಳ ಅಡಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಶೇಖರಗೌಡ ಮಾಲಿ ಪಾಟೀಲ್ ಕರೆ ನೀಡಿದ್ದಾರೆ.

ಕಲಬುರಗಿ: ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಕಾನೂನು ನಿಯಮಗಳನ್ನು ಅರ್ಥ ಮಾಡಿಕೊಂಡು ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡಲು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲರು ಕರೆ ನೀಡಿದರು.

ನಗರದ ಗ್ಯಾಂಡ್ ಹೋಟೇಲ್ ನಲ್ಲಿ ನಡೆದ ಕಲಬುರಗಿ ವಿಭಾಗದ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೂ ಸಹ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಹೊಂದಿರುತ್ತದೆ. ಅದನ್ನು ಹೋಗಲಾಡಿಸಲು ಎಲ್ಲರೂ ಪ್ರಯತ್ನಿಸಬೇಕೆಂದರು. ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಸಂಗ್ರಹಣೆ, ಸಾಲ ವಿತರಣೆ, ಸಾಲ ವಸೂಲಾತಿಯೊಂದಿಗೆ ಆದ್ಯತೆ ನೀಡಬೇಕೆಂದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ವ್ಯವಸ್ಥೆ ಮಾಡುವ ತರಬೇತಿ ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸೂಚಿಸಿದರು.

ಸಮಾರಂಭದಲ್ಲಿ ಮಾತನಾಡಿದ ಕಲಬುರಗಿ ವಿಭಾಗದ ಜಂಟಿ ನಿಬಂಧಕರಾದ ವಿಶ್ವನಾಥ್ ಮಲ್ಕೋಡ್ ಅವರು ಪಟ್ಟಣ ಸಹಕಾರ ಬ್ಯಾಂಕುಗಳು ಕಾನೂನು ನಿಯಮಗಳನ್ನು, ರಿಸರ್ವ್ ಬ್ಯಾಂಕ್ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಜನರ ವಿಶ್ವಾಸಕ್ಕೆ ಪಾತ್ರರಾಗಬೇಕೆಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಲಬುರಗಿ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ವೀರಾರೆಡ್ಡಿ ಅವರು ವಹಿಸಿದ್ದರು.

ಪ್ರಾರಂಭದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಅರುಣ್ ಕುಮಾರ್ ಅರಸೂರು ಅವರು ಸ್ವಾಗತಿಸಿದರು. ಸಲಹೆಗಾರರಾದ ಪಿ. ರುದ್ರಪ್ಪನವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈಲಜಾಚೌಹಾಣ್ ಅವರು ವಂದನಾರ್ಪಣೆಯನ್ನು ಮಾಡಿದರು. ಮಂಜುಳಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಅಭಿಯಂತರರಾದ ಮಲ್ಲಯ್ಯಶೆಟ್ಟಿಯವರು ಕಾರ್ಯಕ್ರಮದ ಸಂಚಾಲಕರಾಗಿ, ಆಯೋಜಿಸಿದ್ದರು.

ಸಮಾರಂಭದಲ್ಲಿ ಸಹಾಯಕ ನಿಬಂಧಕರಾದ ಸಂಜಯ್ ಕಪೂರ್, ತರಬೇತಿ ಕೇಂದ್ರದ ಉಪನ್ಯಾಸಕರಾದ ರಾಜೇಶ್ ಯಾವಗಲ್ ಇತರರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420