ಕಚೇರಿಗಳಲ್ಲಿ ಕರ್ನಾಟಕ ಸಾಂಸ್ಕøತಿಕ ನಾಯಕ ಬಸವಣ್ಣ ಭಾವಚಿತ್ರ ಹಾಕಿ: ಕೆ.ವಿಜಯಕುಮಾರ

ಸುರಪುರ: ಸರಕಾರ ಇಂದು ವಿಶ್ವಗುರು ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿ,ಎಲ್ಲಾ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ವಿಶ್ವಗುರು ಬಸವಣ್ಣನವರ ಕರ್ನಾಟಕ ಸಾಂಸ್ಕøತಿಕ ನಾಯಕ ಎಂದು ಬರೆಯಿಸಿರುವ ಭಾವಚಿತ್ರ ಹಾಕುವಂತೆ ಆದೇಶ ಹೊರಡಿಸಿದ್ದು,ಅದರ ಅಂಗವಾಗಿ ಇಂದು ಈ ಕಾರ್ಯಕ್ರಮ ನಡೆಸಲಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾರ ಮಾತನಾಡಿದರು.

ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ ಭೇದವಿಲ್ಲದ, ವರ್ಗ ಮತ್ತು ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ಬಸವಣ್ಣನವರ ನೇತೃತ್ವದಲ್ಲಿ 12ನೇ ಶತಮಾನದಲ್ಲೇ ನಡೆಯಿತು.

ಸರಳ ಕನ್ನಡದಲ್ಲಿ ವಚನಗಳ ರಚನೆ ಮಾಡಿ ತಮ್ಮ ಬದುಕಿನ ಸಾರವನ್ನು ತುಂಬಿ ಸಾಮಾನ್ಯರಿಗೂ ಅರ್ಥವಾಗುವಂತೆ ಬರೆದರು. ವಚನಗಳಲ್ಲಿ ವೈಚಾರಿಕತೆ, ಸಮಾನತೆ ಪರಿಕಲ್ಪನೆ, ದೂರದೃಷ್ಟಿ, ಮಾನವೀಯ ಅಂತಃಕರಣ ತುಂಬಿಕೊಂಡಿದೆ ಎಂದರು.

ತಾಪಂ ಇಓ ಬಸವರಾಜ ಸಜ್ಜನ್ ಮಾತನಾಡಿ, ಸಮಾಜದಲ್ಲಿನ ಜಾತಿ, ವರ್ಗಗಳ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ ಬಸವಣ್ಣನವರು ಎಲ್ಲರಲ್ಲೂ ಸಮಾನತೆಯ ಬೀಜ ಮಂತ್ರವನ್ನು ಜಪಿಸುವಂತೆ ಮಾಡುವ ಮೂಲಕ ಅನುಭವ ಮಂಟಪವನ್ನು ಸ್ಥಾಪಿಸಿ, ಸಾಮಾಜಿಕ ಕ್ರಾಂತಿಯನ್ನು ಹುಟ್ಟು ಹಾಕಿದರು.

ಕಾಯಕವೇ ಕೈಲಾಸ ಎನ್ನುವ ತತ್ವದಲ್ಲಿ ಕಾಯಕ ನಿಷ್ಠೆಗೆ ಪ್ರಾಧಾನ್ಯತೆ ನೀಡಿ ಪ್ರತಿಯೊಬ್ಬರಲ್ಲೂ ವೃತ್ತಿ ಗೌರವ ಬೆಳೆಸಿದ ಕೀರ್ತಿಯೂ ಕಾಯಕ ಯೋಗಿ ಬಸವಣ್ಣನವರಿಗೆ ಸಲ್ಲುತ್ತದೆ. ಅವರು ವಚನ ಸಾಹಿತ್ಯದ ತತ್ವ ಆದರ್ಶಗಳೇ ಜಾತ್ಯತೀತ, ಸಮಾನತೆ ಹಾಗೂ ಸಹಬಾಳ್ವೆ ಎಂದರು.

ಉಪ ಖಜಾನಾಧಿಕಾರಿ ಸಣ್ಣಕೆಪ್ಪ ಉಪನ್ಯಾಸ ನೀಡಿ, ಜÁತಿ ವ್ಯವಸ್ಥೆ ನಿರಾಕರಿಸಿ ಎಲ್ಲರಲ್ಲೂ ಸಮಾನತೆ ಬಯಸಿದ ಮಹಾನ್ ವ್ಯಕ್ತಿ ಬಸವಣ್ಣ. ಅವರು ಜಾತಿ ರಹಿತ ಸಮಾಜ ಕಟ್ಟುವ ಕನಸು ಕಂಡಿದ್ದರು. ಸ್ತ್ರೀ ಸಮಾನತೆ ಅವರ ಆಶಯವಾಗಿತ್ತು. ಸರ್ವರೂ ಸಮಪಾಲು, ಸಮಬಾಳು ಎಂದು ಸಾರಿದರು. ಅವರ ವಚನಗಳಲ್ಲಿ ಅಡಕವಾಗಿರುವ ಚಿಂತನೆ, ತತ್ವ, ಮೌಲ್ಯ, ಸಿದ್ದಾಂತಗಳು ಸಾರ್ವಕಾಲಿಕ ಶ್ರೇಷ್ಠತೆ ಪಡೆದುಕೊಂಡಿವೆ ಎಂದರು. ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ, ನಾಗಭೂಷಣ ಯಾಳಗಿ ಮಾತನಾಡಿದರು.
ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ವೇದಿಕೆಯಲ್ಲಿದ್ದರು.

ಶಾಸಕರ ಆಪ್ತ ಸಹಾಯಕ ಶಿವರಾಜ್ ನಾಯಕ, ಮುಖಂಡರಾದ ಮಲ್ಲಣ್ಣ ಸಾಹು ಮುಧೋಳ, ವೀರೇಶ ನಿಷ್ಠಿ ದೇಶಮುಖ, ಶಿವಶರಣ ಸಾಹು ಹೈಯಾಳ ರುಕ್ಮಾಪುರ, ಮಹೇಶ ಪಾಟೀಲ್, ಡಾ.ಎಂ.ಎಸ್.ಕನಕರಡ್ಡಿ, ಜಗದೀಶ ಪಾಟೀಲ್, ಸಿದ್ದನಗೌಡ ಹೆಬ್ಬಾಳ, ಉದಯಕುಮಾರ,ಶರಣು ಬಳಿ, ಪ್ರಕಾಶ ಬಣಗಾರ, ಗುರುನಾಥರಡ್ಡಿ,ಸಚಿನಕುಮಾರ ನಾಯಕ,ಶಿವಲಿಂಗ ಹಸನಾಪುರ,ತಿಪ್ಪಣ್ಣ ಶೆಳ್ಳಗಿ,ಡಿ.ಬಿ.ಪಾಟೀಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು. ರವಿ ನಾಯಕ ಸ್ವಾಗತಿಸಿದರು. ಚನ್ನಬಸ್ಸು ನಿರೂಪಿಸಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420