ಕಲಬುರಗಿ: ಪ್ರುಡೆಂಟ್ ಕ್ರಿಕೆಟ್ ಟ್ರೋಫಿ ಸಿಜನ್ ೩-೨೦೨೪ ರ ಫೈನಲ್ ಪಂದ್ಯ ವಿಜೇತ ಶಾಹ ಹುಂಡೈ ತಂಡಕ್ಕೆ ಟ್ರೋಫಿ ವಿತರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ ಯಶವಂತರಾಯ ಅಷ್ಠಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ ಆದರೆ ಆಟಗಾರರು ಬದ್ದತೆ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವನೆ ಮೆರೆಯುವುದು ಅತ್ಯಂತ ಅವಶ್ಯಕ ಎಂದರು.
ಶರಣು ರಟಕಲ್ ಪ್ರತಿಷ್ಠಾನದಿಂದ ಆಯೋಜಿಸಿದ್ದ ಪ್ರುಡೆಂಟ್ ಕ್ರಿಕೆಟ್ ಟ್ರೋಫಿ ಸಿಜನ್ ೩-೨೦೨೪ ರ ಫೈನಲ್ ಪಂದ್ಯದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ವಿತರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ಕಲಬುರಗಿ ಎಪಿಎಂಸಿ ಉಪಾಧ್ಯಕ್ಷರಾದ ರಾಜಕುಮಾರ್ ಕೋಟೆ ಮಾತನಾಡಿ, ಕ್ರೀಡೆಯಲ್ಲಿ ಸಂಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ನಿರಂತರವಾಗಿ ಅಭ್ಯಾಸ ಮಾಡಿದಾಗ ಅತ್ಯುತ್ತಮ ಪ್ರದರ್ಶನ ನೀಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪ್ರುಡೆಂಟ್ ಕ್ರಿಕೆಟ್ ಟ್ರೋಫಿ ಸಿಜನ್ – ೩ ಆಯೋಜಕರಾದ ಶರಣು ರಟಕಲ್, ಮಲ್ಲಿಕಾರ್ಜುನ ಡಂಬಳ, ಪ್ರಾಯೋಜಕರಾದ ಸೈಯದ್ ಮುದಾಸೀರ್, ಮಹೇಶ್ ಸೋನಾರ, ಸಂತೋಷ ಕುಲಕರ್ಣಿ, ಮಂಜುನಾಥ ಗುಂಡಗುರ್ತಿ, ಸಂಗಮೇಶ ಎಂ ಕೆ ಸೇರಿದಂತೆ ನೂರಾರು ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು.
ಈ ಪಂದ್ಯಾವಳಿಯಲ್ಲಿ ಒಟ್ಟು ೭ ತಂಡಗಳು ಪಾಲ್ಗೊಂಡಿದ್ದವು. ಫೈನಲ್ ಪಂದ್ಯದಲ್ಲಿ ಶಾಹ ಹುಂಡೈ ತಂಡ ಕರುಣಾ ಟೊಯೋಟಾ ತಂಡವನ್ನು ಸೋಲಿಸಿ ವಿಜಯ ಪತಾಕೆ ಹಾರಿಸಿ, ಟ್ರೋಫಿ ತನ್ನದಾಗಿಸಿಕೊಂಡಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…