ಕಲ್ಯಾಣ ಕರ್ನಾಟಕ ವಕೀಲರ ಸೌಹಾರ್ದ ಸಹಕಾರಿ ಸಂಘದಿಂದ ಸನ್ಮಾನ

0
9

ಕಲಬುರಗಿ: ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇದೇ ಫೆ. 23ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ ಕುಮಾ‌ರ್ ಅವರನ್ನು ಕಲ್ಯಾಣ ಕರ್ನಾಟಕ ವಕೀಲರ ಸೌಹಾರ್ದ ಸಹಕಾರಿ ಸಂಘ ನಿ. ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಅಂಬಾರಾಯ ಪಟ್ಟಣಕರ್, ಮತ್ತು ನಿರ್ದೇಶಕರುಗಳಾದ ರಮೇಶ್ ಎಸ್ ಕಡಾಳೆ, ದೇವನಾಥ್ ಮಾಳಗೆ, ಶ್ರೀಮತಿ ವಿಜಯಲಕ್ಷ್ಮಿ ಯರಗೋಳ, ಶ್ರೀಮತಿ ಫತ್ರಬಿ ಷಹಾ, ಸನ್ಮಾನಿಸಿದರು. ಹೈಕೋರ್ಟ್ ನ್ಯಾಯಾಧೀಶರಾದ ಬಿ.ಎಂ. ಶ್ಯಾಮಪ್ರಸಾದ್, ಎಚ್.ಟಿ. ನರೇಂದ್ರ ಪ್ರಸಾದೆ, ಅಶೋಕ ಎಸ್. ಕಿಣಗಿ, ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here