ಶಹಾಬಾದ :ತಾಪಂಯಲ್ಲಿ ವಿಕಲಚೇತನರಿಗೆ 5% ಅನುದಾನ ಮಿಸಲಿಟ್ಟು ಅನುದಾನವನ್ನು ಅನುμÁ್ಠನ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಅಂಗವಿಕಲರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಂಗವಿಕಲರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ಮಾತನಾಡಿ,
ತಾಪಂ,ಜಿಪಂಗಳಲಿ ್ಲ ವಿಕಲಚೇತನ ಸಲುವಾಗಿ.5% ಅನುದಾನವನ್ನು ಮೀಸಲಿಡಬೇಕೆಂಬುದು ಸರಕಾರ ಆದೇಶ.
ಈ ಹಿಂದೆ ಸರ್ಕಾರ ಅಂಗವಿಕಲರಿಗೆ ಸೌಲಭ್ಯ ಮೂಲಕ 5% ಅನುದಾನದಲ್ಲಿ ಹೊಲಿಗೆ ಯಂತ್ರ, ಕಂಪ್ಯೂಟರ್, ಲ್ಯಾಪ್ಟಾಪ್, ತ್ರಿಚಕ್ರ ವಾಹನ ಸೌಲಭ್ಯಗಳನ್ನು ನೀಡುತ್ತ ಬಂದಿದೆ.ಇದರಿಂದ ವಿಕಲಚೇತನರಿಗೆ ವ್ಯಯಕ್ತಿಕವಾಗಿ ತುಂಬಾ ಅನುಕೂಲತೆಯನ್ನು ಪಡೆದಿದ್ದಾರೆ.ಆದರೆ ಸದ್ಯ 5% ಅನುದಾನದಲ್ಲಿ ಕಾಮಗಾರಿಗಳ ಮೂಲಕ ಸೌಲಭ್ಯ ಸರ್ಕಾರ ವಿತರಣೆ ಮಾಡುತ್ತಿದೆ. ಶಾಲೆಗಳಲ್ಲಿ ರ್ಯಾಂಪ್, ಸಮುದಾಯ ಶೌಚಾಲಯ ಸೇರಿದಂತೆ ಇತರ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ವಿಕಲಚೇತನರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.ಆದ್ದರಿಂದ ಕೂಡಲೇ ಈ ಹಿಂದೆ ನೀಡುತ್ತಿದ್ದ ಹೊಲಿಗೆ ಯಂತ್ರ, ಕಂಪ್ಯೂಟರ್, ಲ್ಯಾಪ್ ಟಾಪ್, ತ್ರಿಚಕ್ರ ವಾಹನ ಸೌಲಭ್ಯಗಳನ್ನು ಮತ್ತೆ ಜಾರಿಗೆ ತರಬೇಕೆಂದು ಸರಕಾರಕ್ಕೆ ಆಗ್ರಹಿಸಿದರು.
ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫಿರೋಜಾಬಾದ, ಅನಿಲ್ ಮಠಪತಿ, ಸತೀಶ್, ಚಂದು ಕಿಂಡ್ರಿ ಇತರರು ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…