ಸುರಪುರ :ನಗರಕ್ಕೆ ಆಗಮಿಸಿದ್ದ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಸಮಾಜ ಕಲ್ಯಾಣ ಇಲಾಖೆ,ತಾಲೂಕು ಆಡಳಿತ,ತಾಲೂಕು ಪಂಚಾಯತಿ ಹಾಗೂ ನಗರಸಭೆ ವತಿಯಿಂದ ನಡೆಸಲಾದ ಭಾರತ ಸಂವಿಧಾನ ಜಾಗೃತಿ ಜಾಥಾವನ್ನು ಸಂಜೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು,ನಂತರ ಡಾ:ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಜಾಥಾದ ರಥದ ವಾಹನದಲ್ಲಿದ್ದ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೆರವಣಿಗೆಯಲ್ಲಿ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಹಾಗೂ ಮಹಿಳೆಯರಿಂದ ಪೂರ್ಣ ಕುಂಭ ಕಳಸ, ಛದ್ಮವೇಷ, ಡೊಳ್ಳು ಕುಣಿತ, ಅಂಬೇಡ್ಕರ್ ಮತ್ತು ಸಂವಿಧಾನದ ಗೀತೆಗಳನ್ನು ಹಾಡುವ ಮೂಲಕ ಸಂಭ್ರಮದ ಮೆರವಣಿಗೆ ನಡೆಯಿತು.ನಗರದ ಪ್ರಮುಖ ಬೀದಿಗಳ ಮೂಲಕ ಮಹಾತ್ಮ ಗಾಂಧಿ ವೃತ್ತ ದಿಂದ ತಹಸಿಲ್ದಾರ್ ಕಚೇರಿ ವರೆಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಯಾದಗಿರಿ ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಭಾಗವಹಹಿಸಿ ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು, ಬಿಜೆಪಿ ಯುವ ಮುಖಂಡ ಶಂಕರ ನಾಯಕ, ತಹಸೀಲ್ದಾರ್ ಕೆ.ವಿಜಯಕುಮಾರ, ತಾಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಶ್ರುತಿ.ಎಂ, ಎಸ್ಟಿ ಇಲಾಖೆ ಅಧಿಕಾರಿ ಮೊಹ್ಮದ್ ಸಲೀಂ, ಪೌರಯುಕ್ತ ಜೀವನಕುಮಾರ ಕಟ್ಟಿಮನಿ, ಪ್ರಭಾರಿ ಬಿಇಒ ಪಂಡಿತ್ ನಿಂಬೂರ, ಖಾದರ್ ಪಟೇಲ್, ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ನೂರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…