ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಸಂತಾಪ

0
84

ಕಲಬುರಗಿ: ಸುರಪುರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ವಿಧಾನ ಸಭೆಯಲ್ಲಿ ಮಾತನಾಡಿರುವ ಅವರು ರಾಜಾ ವೆಂಕಟಪ್ಪ ನಾಯಕರು ಈಚೆಗಷ್ಟೇ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷತೆ ವಹಿಸಿದ್ದರು, ಜೊತೆಗೇ ತಾವು ಅಧ್ಯಕ್ಷರಾಗಿರುವ ಕೆಕೆಆರ್‌ಡಿಬಿಯಲ್ಲೂ ಸದಸ್ಯರಾಗಿದ್ದರು. ಹೆಚ್ಚಿನ ಅನುದಾನ ಮಂಡಳಿಗೆ ತಂದು ಅಭಿವೃದ್ಧಿ ಮಾಡುವ ಕನಸು ಕಂಡಿದ್ದರು. ಆದರೆ ವಿಧಿ ಅವರನ್ನು ಬಾರದ ಲೋಕಕ್ಕೆ ಕರೆದೊಯ್ದಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋಡುವಂತೆ ತಾವು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

Contact Your\'s Advertisement; 9902492681

1994 ರಲ್ಲಿ ರಾಜಾ ವೆಂಕಟಪ್ಪ ನಾಯಕರು ಮೊದಲ ಬಾರಿಗೆ ಶಾಸಕರಾದಾಗಿನಿಂದ ತಮ್ಮ ತಂದೆಯವರ ಜೊತೆ ತುಂಬ ಅನ್ಯೋನ್ಯ ಸಂಬಂಧ ಹೊಂದಿದ್ದರೆಂದು ಮೆಲಕು ಹಾಕಿರುವ ಡಾ. ಅಜಯ್‌ ಸಿಂಗ್‌ ಕೆಕೆಆರ್‌ಡಿಬಿ ಅಧ್ಯಕ್ಷರಾಗಿಯೂ ತವು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುವುದಾಗಿ ಹೇಳಿದ್ದಾರೆ.

ವೆಂಕಟಪ್ಪ ನಾಯಕರ ಅಕಾಲಿಕ ನಿಧನದ ದುಃಖ ಭರಿಸುವ ಶಕ್ತಿ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ದೇವರು ದಯಪಾಲಿಸಲಿ ಎಂದು ಡಾ. ಅಜಯ್‌ ಸಿಂಗ್‌ ಪ್ರಾರ್ಥಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here