ಬಿಸಿ ಬಿಸಿ ಸುದ್ದಿ

ಮುಖ್ಯ ರಸ್ತೆಯ ಸಂಚಾರ ಸಮಸ್ಯೆ ಪರಿಹರಿಸಿ: ಮುಖ್ಯಾಧಿಕಾರಿಗೆ ಬಿಜೆಪಿ ಆಗ್ರಹ

ವಾಡಿ: ಪಟ್ಟಣದ ಮುಖ್ಯ ರಸ್ತೆಯ ಮಧ್ಯದಲ್ಲಿರುವ ಕಂಬವನ್ನು ತೆಗೆದು ಸುಗಮ ಸಂಚಾರಕ್ಕೆ ಅನುವು ಮಾಡಿ ಎಂದು ಮುಖ್ಯಾಧಿಕಾರಿಗಳಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ವೃತ್ತದಲ್ಲಿನ ರಸ್ತೆ ಮಧ್ಯದಲ್ಲಿರುವ ಕಂಬವನ್ನು ಸ್ಥಳಾಂತರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ.

ಮೊದಲಿನ ಅಧಿಕಾರಿಗಳು ಸಂತ ಶ್ರೀ ಸೇವಲಾಲ ಮಹಾರಾಜರ, ನಿಜ ಶರಣ ಅಂಬಿಗರ ಚೌಡಯ್ಯ ರವರ,ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ವಿಶ್ವ ಗುರು ಬಸವಣ್ಣನವರ ವೃತ್ತದಲ್ಲಿನ ಕಂಬವನ್ನು ಪಕ್ಕಕ್ಕೆ ಸ್ಥಳಾಂತರಿಸಿ ವಾಹನಗಳ ದಟ್ಟಣೆ,ಜನಸಂದಣಿ ತಗ್ಗಿಸಲ ಅನುವು ಮಾಡಿದ್ದಾರೆ.

ಅದರಂತೆ ತಾವು ತಕ್ಷಣ ರಸ್ತೆ ಮಧ್ಯದಲ್ಲಿನ ಕಂಬದ ಜೋತೆಗೆ ರಸ್ತೆಯ ಮೇಲಿರುವ ಅಡೆತಡೆಗಳನ್ನು ತೆಗೆದು ವಾಹನಗಳಿಗೆ ಮತ್ತು ಸಾರ್ವಜನಿಕರರಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಿ,ಹಾಗೆ ಅನಧಿಕೃತ ವೃತ್ತಗಳಿಗೆ ಕಡಿವಾಣ ಹಾಕಿ ಮುಂದೆ ಯಾವುದೇ ರೀತಿಯ ಅನಾಹುತ ವಾಗದಂತೆ ತಾವು ಮುಂಜಾಗ್ರತೆಯನ್ನು ವಹಿಸಬೇಕಾಗಿ ಎಂದು ಮುಖ್ಯಾಧಿಕಾರಿ ಸಿ ಫಕ್ರುದ್ದಿನ್ ಅವರಿಗೆ ಮನವಿಪತ್ರದ ಮೂಲಕ ಆಗ್ರಹಿಸಿದ್ದಾರೆ.

ಈ ಸಂಧರ್ಭದಲ್ಲಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

7 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

8 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

9 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

9 hours ago