ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಳಲಿದೆ. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಮುಂತಾದ ಘಟಾನುಘಟಿ ನಾಯಕರ ಭವಿಷ್ಯ ನಿರ್ಧರಿಸಿರುವ ಈ ಚುನಾವಣೆ ಇದಾಗಿದೆ. ಬಿಗಿ ಬಂದೋಬಸ್ತ್ ನಡುವೆ ಚುನಾವಣೆ ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೇ ನೋಡಿಕೊಳ್ಳಲು ಆಯೋಗ ಮುನ್ನೆಚ್ಚರಿಕಾ ಕ್ರಮವಾಗಿ ಸುಮಾರು 45 ಸಾವಿರ ಪೊಲೀಸರು ಭದ್ರತೆಗಾಗಿ ನಿಯೋಜಿಸಿದೆ.
ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸುಮಾರು 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.
ಈ ಎಲ್ಲಾ ಕ್ಷೇತ್ರಗಳಲ್ಲಿ ಸುಮಾರು 28,028 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 5,674 ಸೂಕ್ಷ್ಮ, 22,354 ಸಾಮಾನ್ಯ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಆಯೋಗ ಒಟ್ಟು 90,997 ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ ಎಂದು ತಿಳಿದು ಬಂದಿದೆ.
ಚುನಾವಣಾ ಕರ್ತವ್ಯಕ್ಕಾಗಿ 1531 ವಲಯ ಸಂಚಾರಿ ಗಸ್ತು ವಾಹನಗಳು, 337 ವಲಯ ಮೇಲುಸ್ತುವಾರಿ ಸಂಚಾರಿ ಗಸ್ತು, 125 ಬಿಎಸ್ಪಿ ಸಂಚಾರಿ ಗಸ್ತು, 382 ಸಂಚಾರಿ ತಂಡಗಳು, 384 ಸ್ಥಿರ ಕಣ್ಗಾವಲು ತಂಡಗಳು, 5 ಸಿಆರ್ಪಿಎಫ್ ಪಡೆಗಳು, ಸೂಕ್ಷ್ಮ ಮತಗಟ್ಟೆಗಳಿಗೆ 912 ಸಿಆರ್ಪಿಎಫ್ನ ಅರ್ಧ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಮತದಾನ ವೇಳೆ ಕಾನೂನು ಸುವ್ಯವಸ್ಥೆಗಾಗಿ 143 ಕೆಎಆರ್ಪಿ, 340 ಡಿಎಆರ್, ಸಿಎಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…