ಬಿಸಿ ಬಿಸಿ ಸುದ್ದಿ

ನಾಳೆ ರಾಜ್ಯದಲ್ಲಿ 3 ನೇ ಹಂತದ ಮತದಾನ. 237 ಅಭ್ಯರ್ಥಿಗಳ ಭವಿಷ್ಯ, 2.43 ಕೋಟಿ ಮತದಾರರ ಕೈಯಲ್ಲಿ

ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಳಲಿದೆ. ಕಾಂಗ್ರೆಸ್​​, ಜೆಡಿಎಸ್ ಸೇರಿದಂತೆ ಮುಂತಾದ ಘಟಾನುಘಟಿ ನಾಯಕರ ಭವಿಷ್ಯ ನಿರ್ಧರಿಸಿರುವ ಈ  ಚುನಾವಣೆ ಇದಾಗಿದೆ. ಬಿಗಿ ಬಂದೋಬಸ್ತ್​​ ನಡುವೆ ಚುನಾವಣೆ ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೇ ನೋಡಿಕೊಳ್ಳಲು ಆಯೋಗ ಮುನ್ನೆಚ್ಚರಿಕಾ ಕ್ರಮವಾಗಿ ಸುಮಾರು 45 ಸಾವಿರ ಪೊಲೀಸರು ಭದ್ರತೆಗಾಗಿ ನಿಯೋಜಿಸಿದೆ.

ನಾಳೆ ಮತದಾನ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳು:-

ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸುಮಾರು 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.

ಚುನಾವಣೆ ಆಯೋಗದ ಸಿದ್ಧತೆಗಳು:-

ಈ ಎಲ್ಲಾ ಕ್ಷೇತ್ರಗಳಲ್ಲಿ ಸುಮಾರು 28,028 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 5,674 ಸೂಕ್ಷ್ಮ, 22,354 ಸಾಮಾನ್ಯ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಆಯೋಗ ಒಟ್ಟು 90,997 ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ ಎಂದು ತಿಳಿದು ಬಂದಿದೆ.

ಕಾರ್ಯನಿರ್ವಹಿಸುವ ಸಿಬ್ಬಂದಿಗಳು:

ಚುನಾವಣಾ ಕರ್ತವ್ಯಕ್ಕಾಗಿ 1531 ವಲಯ ಸಂಚಾರಿ ಗಸ್ತು ವಾಹನಗಳು, 337 ವಲಯ ಮೇಲುಸ್ತುವಾರಿ ಸಂಚಾರಿ ಗಸ್ತು, 125 ಬಿಎಸ್‍ಪಿ ಸಂಚಾರಿ ಗಸ್ತು, 382 ಸಂಚಾರಿ ತಂಡಗಳು, 384 ಸ್ಥಿರ ಕಣ್ಗಾವಲು ತಂಡಗಳು, 5 ಸಿಆರ್‍ಪಿಎಫ್ ಪಡೆಗಳು, ಸೂಕ್ಷ್ಮ ಮತಗಟ್ಟೆಗಳಿಗೆ 912 ಸಿಆರ್​​​ಪಿಎಫ್​​​ನ ಅರ್ಧ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಮತದಾನ ವೇಳೆ  ಕಾನೂನು ಸುವ್ಯವಸ್ಥೆಗಾಗಿ 143 ಕೆಎಆರ್​​ಪಿ, 340 ಡಿಎಆರ್, ಸಿಎಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420