ವಿದ್ಯಾರ್ಥಿಗಳು ಬರವಣಿಗೆ ಕೌಶಲ್ಯ ವೃದ್ಧಿಸಿಕೊಂಡು ಸ್ವಂತ ಆಲೋಚನೆಯಿಂದ ಮಾದರಿಗಳನ್ನು ಮಂಡಿಸಿ

ಕಲಬುರಗಿ: ನಗರದ ಶಂಕರಗೌಡ ಪೊಲೀಸ ಪಾಟೀಲ್ ಅಂದೋಲ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ವಿಜ್ಞಾನ ವಸ್ತು ಪ್ರದರ್ಶನವನ್ನು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಕ್ರಪ್ಪ ಗೌಡ ಬಿರಾದಾರ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಬರವಣಿಗೆ ಕೌಶಲ್ಯವನ್ನು ವೃದ್ಧಿಸಿಕೊಂಡು ತಮ್ಮ ಸ್ವಂತ ಹೊಸ ಹೊಸ ಆಲೋಚನೆಗಳಿಂದ ಮಾದರಿಗಳನ್ನು ಮಂಡಿಸಬೇಕು. ಶಿಕ್ಷಕರು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ವಿಜ್ಞಾನ ಶಿಕ್ಷಕ ಚಂದ್ರಶೇಖರ್ ಪಾಟೀಲ್ ಯಳಸಂಗಿ ವಿಜ್ಞಾನ ಎಂಬುದು ಕೇವಲ ಪಾಶ್ಚಿಮಾತ್ಯ ದೇಶಕ್ಕೆ ಸೀಮಿತವಾಗಿದ್ದ ಕಾಲದಲ್ಲಿ ಸರ್ ಸಿವಿ ರಾಮನ್ ರು ಕೇವಲ 200 ರೂಪಾಯಿ ವೆಚ್ಚದಲ್ಲಿ ತಾವೇ ಅಳವಡಿಸಿಕೊಂಡ ಉಪಕರಣಗಳ ಸಹಾಯದಿಂದ 1928 ಫೆಬ್ರವರಿ 28ರಂದು ಇಡೀ ವಿಶ್ವ ಬೆರಗಾಗುವಂತಹ ರಾಮನ್ ಪರಿಣಾಮವನ್ನು ಜಗತ್ತಿಗೆ ಪರಿಚಯಿಸಿದ ದಿನ. ಈ ದಿನ ಭಾರತದ ವೈಜ್ಞಾನಿಕ ಕ್ಷೇತ್ರದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡಬೇಕಾದ ದಿನ ನಿರ್ದಿಷ್ಟ ತರಂಗಾಂತರಗಳ ಬೆಳಕಿನ ಕಿರಣಗಳನ್ನು ಸರ್ ಸಿ ವಿ ರಾಮನ್ ಗಮನಿಸಿದರು. ಈ ಅಸಂಗತ ಚದುರುವಿಕೆಯ ವಿದ್ಯಮಾನ ರಾಮನ್ ಪರಿಣಾಮ ಎಂದು ಪ್ರಖ್ಯಾತವಾಯಿತು.

ಈ ಅಪರೂಪದ ಸಂಶೋಧನೆಯ ಸ್ಮರಣೆಗಾಗಿ ಪ್ರತಿವರ್ಷ ಫೆಬ್ರುವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಿ ವೈಜ್ಞಾನಿಕ ಸಾಧನೆಗಳನ್ನು ಅನಾವರಣಗೊಳಿಸಲಾಗುತ್ತಿದೆ.

ಆದ್ದರಿಂದ ವಿದ್ಯಾರ್ಥಿಗಳು ಸಂಶೋಧನಾತ್ಮಕ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಬಾಬುರಾವ್ ಕುಲಕರ್ಣಿ ಬಿಐ ಆರ್‌ಟಿ ಅಪ್ಪಾಸಾಹೇಬ ಪಾಟೀಲ ಸಿ ಆರ್ ಸಿ ಮಲಿಕ್ ಸಾಬ ನದಾಫ್ ಶಾಲೆಯ ಮುಖ್ಯಗುರುಗಳಾದ ಶ್ರೀದೇವಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಜಿಎಸ್ ಪಾಟೀಲ್ ಅಂದೋಲ ವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420