ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಸದ್ದಾಂ ವಜೀರಗಾಂವ ನೇಮಕ

0
81

ಕಲಬುರಗಿ: ಬಿಜೆಪಿ ಕರ್ನಾಟಕ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನಾಗಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದ ಸದ್ದಾಂಹುಸೇನ್ ಅವರನ್ನು ನೇಮಕಮಾಡಲಾಗಿದೆ.

ಬೆಂಗಳೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ಬಿಜೆಪಿ ಕರ್ನಾಟಕ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಧ್ಯಕ್ಷರಾದ ಡಾ. ಅನೀಲ ಥಾಮಸ್ ಅವರು ನೇಮಕಮಾಡಿ ರುವ ಆದೇಶ ಪತ್ರ ನೀಡಿ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ತಿಳಿಸಿದ್ದಾರೆ.

Contact Your\'s Advertisement; 9902492681

ಸದ್ದಾಂ ಹುಸೇನ್ ಅವರು ಕಳೆದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ರಾಜ್ಯ ನಿರ್ದೆಶಕಾರಾಗಿ 3 ವರ್ಷ ಸೇವೆ ಸಲ್ಲಿಸಿದ್ದರು .

ಈ ಸಂದರ್ಭದಲ್ಲಿ ಬಿಜೆಪಿ ಕರ್ನಾಟಕ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರದಾನ ಕಾರ್ಯದರ್ಶಿ ರೌಫೋದ್ದಿನ ಕಚೇರಿವಾಲೆ, ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುಕ್ತಾರಹುಸೇನ ಪಠಾಣ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here