ಕರ್ನಾಟಕ ಕಾನೂನು ಮಹಾವಿದ್ಯಾಲಯದಲ್ಲಿ ‘ಸಾಮಾಜಿಕ ನ್ಯಾಯ ದಿನಾಚರಣೆʼ

ಕಲಬುರಗಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಬುರಗಿ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕರ್ನಾಟಕ ಕಾನೂನು ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕರ್ನಾಟಕ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ʻಸಾಮಾಜಿಕ ನ್ಯಾಯ ದಿನಾಚರಣೆʼ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರಗಿಯ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀನಿವಾಸ ನವಲೆಯವರು ಸಸಿಗೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದರು. ನವಲೆಯವರು ಮಾತನಾಡುತ್ತಾ ʻಸಾಮಾಜಿಕ ನ್ಯಾಯಕ್ಕಾಗಿ ಕಾನೂನು ಸೇವಾ ಪ್ರಾಧಿಕಾರ ನೊಂದ ಜನತೆಯ ಮನೆಬಾಗಿಲಿಗೆ ನೀಡುವ ನಿಟ್ಟಿನಲ್ಲಿ ಉಚಿತವಾಗಿ ಪರಿಣಿತ ವಕೀಲರನ್ನು ನೇಮಿಸುವದರೊಂದಿಗೆ ಹಾಗೂ ಉಚಿತ ಕಾನೂನು ಅರಿವು – ನೆರವು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ದೊಡ್ಡ ದೊಡ್ಡ ನಗರಗಳವರೆಗೆ ಆಯೋಜನೆ ಮಾಡುತ್ತಾ ಶ್ರಮಿಸುತ್ತಿದ್ದು. ನೊಂದವರು ಕಾನೂನು ಸೇವೆ ಪ್ರಾಧಿಕಾರದಿಂದ ಉಚಿತ ಸೇವೆಯನ್ನು ಪಡೆಯಬೇಕಾಗಿ ಕೋರಿದರು.

ಉಪನ್ಯಾಸಕರಾಗಿ ಆಗಮಿಸಿದ ನ್ಯಾಯವಾದಿ ಹಾಗೂ ಮಹಾತ್ಮಗಾಂಧಿ ಗ್ರಾಹಕರ ಹಿತ ರಕ಼್ಷಣೆ ವೇದಿಕೆಯ ಕಾರ್ಯದರ್ಶಿಗಳಾದ ವೈಜನಾಥ. ಎಸ್‌ ಝಳಕಿ ಯವರು ಸಾಮಾಜಿಕ ನ್ಯಾಯ ದಿನಾಚರಣೆ ಕುರಿತು ವಿಶೇಷವಾದ ಉಪನ್ಯಾಸವನ್ನು ನೀಡುತ್ತಾ ʻ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಿಕೊಡುವಲ್ಲಿ ನ್ಯಾಯಾಲಯಗಳ, ನ್ಯಾಯವಾದಿಗಳ ಹಾಗೂ ಕಾನೂನು ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು. ನೊಂದವರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಹಾಗೂ ಸಂವಿಧಾಂನದ ಆಶೋತ್ತರಗಳನ್ನು ಈಡೇರಿಸುವಲ್ಲಿ ಕಾನೂನು ವಿದ್ಯಾರ್ಥಿಗಳು ಹೆಚ್ಚಾಗಿ ಶ್ರಮಿಸಬೇಕಾಗಿದೆ ಎಂದರು.

ನ್ಯಾಯಾಲಯಗಳು ವಿಶೇಷ ಕಾಯ್ದೆಗಳಡಿ ನೊಂದ ಜನತೆಗೆ ಒದಗಿಸಿಕೊಟ್ಟ ಸಾಮಾಜಿಕ ನ್ಯಾಯದ ಕುರಿತು ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸುತ್ತಾ ವಿವರವಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾನೂನು ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಜೆ. ಜೋಷೆಫ್‌ ಅವರು ವಹಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ನಿವೇದಿತಾ ಪಾಟೀಲ ನಿರ್ವಹಿಸಿದರು. ವಂದನಾರ್ಪಣೆಯನ್ನು ಶೀಲಾ ನೆಲ್ಲಗಿ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರಾದ ಎಚ್ ಕೆ. ಕುನ್ನೂರ, ಜಾವೇದ್‌ ಇಶ್ರತ್‌, ಈರಮ್ಮ ಎಚ್‌ ಔರಾದ್‌, ಆಯಶಾ ಜಬೀನ್‌, ಅನುರಾಧಾ, ಶೃತಿ ಕಾಂದೆ, ರಾಜು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420