ಮತಾಂತರ ಆರೋಪ: ರಟಕಲ್ ಗ್ರಾಮದ ನರ್ಸ್ ಅಶ್ವಿನಿಗೆ ರಕ್ಷಣೆ ನೀಡುವಂತೆ ಡಿವೈಎಫ್‍ಐ ಆಗ್ರಹ

ಕಲಬುರಗಿ: ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕೋಮುವಾದ ಹೆಚ್ಚಿಸುತ್ತಿರುವ ಹಿಂದೂ ಜಾಗೃತಿ ಸೇನೆಯ ಮುಖಂಡರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅಶ್ವಿನಿ ಯವರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್‍ಐ) ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಶರಣ ಸೂಫಿ ಸಂತರ ನಾಡಿನಲ್ಲಿ ಜಾತಿವಾದ, ಕೋಮುವಾದಕ್ಕೆ ನಾವು ಜಾಗ ನೀಡುವುದು ಬೇಡ. ಜಾತಿ ಧರ್ಮಗಳನ್ನು ಮೀರಿದ ಮಾನವೀಯತೆ ನಮ್ಮೆಲ್ಲರ ಮೊದಲ ಆದ್ಯತೆ ಆಗಬೇಕು. ಆದರೆ ಕಳೆದ ವಾರ 22 ರಂದು ರಟಕಲ್ ಗ್ರಾಮದ ನರ್ಸ್ ಅಶ್ವಿನಿ ಅವರ ಮೇಲೆ ಮತಾಂತರದ ಸುಳ್ಳು ಆರೋಪ ಹೊರಿಸಿ ಕೋಮುವಾದ ಹೆಚ್ಚಿಸಲು ಹಿಂದೂ ಜಾಗೃತಿ ಸೇನೆಯು ಮುಂದಾಗಿದೆ ಎಂದು ಸಂಘಟನೆಯ ಸಂಚಾಲನಾ ಸಮಿತಿ ಲವಿತ್ರ ಆರೋಪಿಸಿದರು.

ನರ್ಸ್ ಅಶ್ವಿನಿ ಯವರು ತಮ್ಮ ಮನೆಯಲ್ಲಿ ಪೂಜೆ ಮಾಡುತ್ತಿರುವ ಸಂಧರ್ಭದಲ್ಲಿ ಹಿಂದೂ ಜಾಗೃತಿ ಸೇನೆಯ ಮುಖಂಡರು ಒತ್ತಾಯಪೂರ್ವಕ ಮನೆಯೊಳಗೆ ಬಂದು ಪೂಜೆ ಮಾಡುತ್ತಿರುವ ಅಶ್ವಿನಿ ಹಾಗೂ ಸಂಗಡಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮನೆಯೊಳಗೆ ಒತ್ತಾಯಪೂರ್ವಕ ನುಗ್ಗಿ ಅವರನ್ನು ಪೂಜೆ ಮಾಡುತ್ತಿರುವ ಕೋಣೆಯಿಂದ ಹೊರದೂಡುವುದಲ್ಲದೇ ನೀವು ಮತಾಂತರ ಮಾಡುತ್ತಿದ್ದೀರಿ ಎಂದು ಅವರಿಗೆ ಬೆದರಿಕೆ ಹಾಕಿ ಗ್ರಾಮದಲ್ಲಿ ವಿವಾದ ಹುಟ್ಟುಹಾಕಿದ್ದಾರೆ.

ಅಶ್ವಿನಿಯವರು ತಮ್ಮ ಕೆಲಸಕ್ಕೆಂದು ಹೋಗುವಾಗ ಮತ್ತೆ ಅವರಿಗೆ ಜೀವ ಬೆದರಿಕೆ ನೀಡಿದ್ದಾರೆ. ಅಶ್ವಿನಿ ಯವರು ಅಟ್ರಾಸಿಟಿ ಕೇಸನ್ನು ದಾಖಲಿಸಿದ್ದಾರೆ ಆದರೆ ಪೊಲೀಸರು ಇದರ ಬಗ್ಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಅಶ್ವಿನಿ ಯವರಿಗೆ ಜೀವ ಬೆದರಿಕೆ ಇರುವುದರಿಂದ ಅವರಿಗೆ ರಕ್ಷಣೆ ನೀಡಬೇಕು ಎಂದು ಸಂಘಟನೆಯ ಸದಸ್ಯರು ಆಗ್ರಹಿಸಿದರು.

ಜಿಲ್ಲಾಡಳಿತ ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಧರ್ಮದ ಹೆಸರಲ್ಲಿ ನಾಡಿನ ಸೌಹಾರ್ಧತೆಯನ್ನು ಕದಡುತ್ತಿರುವ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಾಜ, ನಾಗಮ್ಮ, ಆಕಾಶ ಚಿಂಚನಸೂರ, ಕಮಲಾಕರ, ಕೃಷ್ಣಪ್ಪ ಧನ್ನಿ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420