ಪಿಎಂ ಬಿರಾದಾರ ಚಾರಿಟೇಬಲ್ ಡಯಾಲಿಸಿಸ್ ಸೆಂಟರ್‍ನ ಮೂರನೇ ವಾರ್ಷಿಕೋತ್ಸವ

ಕಲಬುರಗಿ:ಳ ನಗರದ ಶ್ರೀಮತಿ ಪೂರ್ಣಿಮಾ ಪಿಎಂ ಬಿರಾದಾರ ಚಾರಿಟೇಬಲ್ ಡಯಾಲಿಸಿಸ್ ಸೆಂಟರ್‍ನ ಮೂರನೇ ವಾರ್ಷಿಕೋತ್ಸವದಲ್ಲಿ ಡಾ.ಪಿಎಂ ಬಿರಾದಾರ ಅವರನ್ನು ಸನ್ಮಾನಿಸಲಾಯಿತು.

ಕಲಬುರಗಿ: ಬಡವರಿಗಾಗಿ ನಿರಂತರ ಉಚಿತ ಸೇವೆ ನೀಡುತ್ತಿರುವ ಶ್ರೀಮತಿ ಪೂರ್ಣಿಮಾ ಪಿ. ಎಂ.ಬಿರಾದಾರ ಚಾರಿಟೇಬಲ್ ಡಯಾ ಲಿಸಿಸ್ ಸೆಂಟರ್‍ನ ಮೂಲ ಸೌಕರ್ಯ ಅಭಿವೃದ್ಧಿಗೆ 5 ಲಕ್ಷ ರೂ.ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಹೇಳಿದರು.

ನಗರದ ಪೂರ್ಣಿಮಾ ಪಿಎಂ ಬಿರಾದಾರ ಚಾರಿಟೇಬಲ್ ಡಯಾಲಿಸಿಸ್ ಸೆಂಟರ್ ವಾರ್ಷಿಕೋತ್ಸವದಲ್ಲಿ ಮೂರನೇ ಮಾತನಾಡಿದ ಅವರು, ಮೂರು ವರ್ಷಗಳಿಂದ ಉತ್ತಮ ಸೇವೆ ನೀಡಲಾಗುತ್ತಿದೆ. ಯಾವುದೇ ಕಾಪೆರ್Çರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ನಗರ ಪೆÇಲೀಸ್ ಕಮಿಷನರ ಚೇತನ್ ಆರ್, ಮಾತನಾಡಿ, ಜನರಲ್ಲಿ ಸೇವೆ ಮಾಡುವ ಎಲ್ಲರೂ ಬೆಳೆಸಿಕೊಳ್ಳಬೇಕು. 3 ವರ್ಷಗಳಿಂದ ಬಡವರಿಗೆ ಉಚಿತ ಡಯಾಲಿಸಿಸ್ ಮಾಡಲಾಗುತ್ತಿದೆ. ಇದರಿಂದ ಬಡವರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಇದೊಂದು ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.

ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸ್ನೇಹಿತರು ಸೇರಿಕೊಂಡು ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಆದರೆ, ಇಲ್ಲಿ ನಿಜವಾಗಿಯೂ ಕೂಡ ಇಲ್ಲಿನ ಸ್ನೇಹಿತರ ಗುಂಪು ಸೇವೆಯ ಮೂಲಕ ಬದಲಾವಣೆ ಮಾಡುತ್ತಿದೆ. ಇದು ಹೀಗೆ ಮುಂದುವರಿಯಲಿ ಎಂದು ಹೇಳಿದರು.

ನಾಗನಹಳ್ಳಿ ಪೆÇಲೀಸ್ ತರಬೇತಿ ಕೇಂದ್ರದ ಪ್ರಾಚಾರ್ಯ ಡಿ.ಕಿಶೋರ ಬಾಬು, ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ್, ಟ್ರಸ್ಟ್ ಗೌರವಾಧ್ಯಕ್ಷ ಡಾ.ಪಿಎಂ ಬಿರಾದಾರ, ಅಧ್ಯಕ್ಷ ಶರಣು ಪಪ್ಪಾ, ಕಾರ್ಯದರ್ಶಿ ಶರಣಗೌಡ ಯರಗಲ್, ಜಂಟಿ ಕಾರ್ಯದರ್ಶಿ ರಾಮಕೃಷ್ಣ ಬೋರಾಳಕರ್, ಉಪ ಮೇಯರ್ ಶಿವಾನಂದ ಪಿಸ್ತಿ, ಶಿವರಾಜ ಖೂಬಾ ಇತರರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

27 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

48 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420