ಚಿತ್ತಾಪುರ: ತಪಾಸಣೆ ದಿನವೇ ಯುಡಿಐಡಿ ಕಾರ್ಡ್ ವಿತರಿಸಲು ಒತ್ತಾಯ

0
28

ಚಿತ್ತಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಬಗೆಯ ಅಂಗವಿಕಲತೆ ಕುರಿತು ತಪಾಸಣೆ ನಡೆಸಿದ ದಿವಸವೇ ಅಂಗವಿಕಲರಿಗೆ ಯುಡಿಐಡಿ ಗುರುತಿನ ಕಾರ್ಡ್ ವಿತರಣೆ ಮಾಡಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹೀಂ ಮನವಿ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಅಂಗವಿಕಲರ ಗುರುತಿನ ಚೀಟಿಗಾಗಿ ತಪಾಸಣೆ ನಡೆಯುವ ದಿವಸವೇ ಯುಡಿಐಡಿ ಕಾರ್ಡ್ ವಿತರಿಸಬೇಕು ಎಂದು ಆದೇಶ ಇದೆ ಅದು ಪಾಲನೆಯಾಗುತ್ತಿಲ್ಲ. ಆನ್‌ಲೈನ್ ಮೂಲಕವೂ ಯುಡಿಐಡಿ ಕಾರ್ಡ್ ಬರುತ್ತಿಲ್ಲ. ಹೀಗಾಗಿ ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.

Contact Your\'s Advertisement; 9902492681

ಯುಡಿಐಡಿ ಗುರುತಿನ ಕಾರ್ಡ್ ವಿತರಣೆ ಕೆಲಸಕ್ಕಾಗಿ ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಬೇಕು. ಖಾಸಗಿ ಆಪರೇಟರ್ ಇರುವುದರಿಂದ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರನ್ನು ತೆಗೆದು ಕಾಯಂ ಸಿಬ್ಬಂದಿ ನೇಮಿಸಬೇಕು. ವಿವಿಧ ಬಗೆಯ ಅಂಗವೈಕಲ್ಯ ಹೊಂದಿರುವವರು ಕಾರ್ಡ್ ಪಡೆಯಲು ಸಮಸ್ಯೆ ಅನುಭವಿಸುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here