ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಕನ್ನಡಿಗರದು : ಮನು ಬಳಿಗಾರ

ಕಲಬುರಗಿ: ‘ಕನ್ನಡ ಸಾಹಿತ್ಯ ಮತ್ತು ಸಂಸ್ಕøತಿ’ ಎಂಬ ವಿಷಯ ಕುರಿತು ಮಾತನಾಡುತ್ತಾ, ಕನ್ನಡ ಸಾಹಿತ್ಯ, ಭಾಷೆ ಉಳಿಸಿ ಬೆಳೆಸುವ ಕೆಲಸ ಕಾರ್ಯಗಳು, ಕಾರ್ಯಕ್ರಮಗಳು ಆಗಬೇಕು. ಇಲ್ಲದಿದ್ದರೆ ಕನ್ನಡ ಭಾಷೆ ಉಳಿಸಿಕೊಳ್ಳುವುದ ಕಷ್ಟವಾಗುತ್ತದೆ. 50 ವರ್ಷದ ಹಿರಿದಾದ ಕನ್ನಡ ಅಧ್ಯಯನ ಸಂಸ್ಥೆ ತನ್ನ ಕಾರ್ಯಚಟುವಟಿಕೆಗಳ ಮೂಲಕ ಶ್ರಮಿಸುತ್ತಿರುವುದು ಖುಷಿಯೆನಿಸುತ್ತದೆ ಎಂದರು.

ಕನ್ನಡ, ಸಾಹಿತ್ಯ ಭಾಷೆ, ಸಂಸ್ಕøತಿ ಕಟ್ಟುವ ಕೆಲಸ ಹೀಗೆಯೇ ನಿರಂತರವಾಗಿ ನಡೆಯಬೇಕು ಅಂದಾಗ ನಾಡು-ನುಡಿಯ ಸಂಸ್ಕøತಿ ಚಲನಶೀಲಗೊಳ್ಳುವುದು ಎಂದು ಹೇಳಿದರು.

ಅವರು ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ಸರಣಿ ಉಪನ್ಯಾಸ (ಮಾಲೆ-4)ರಲ್ಲಿ ನಾಡೋಜ ಡಾ. ಮನು ಬಳಿಗಾರ ಅಭಿಪ್ರಾಯಪಟ್ಟರು ನಾವು ಪ್ರತಿಯೊಬ್ಬರು ಕನ್ನಡವನ್ನು ಉಳಿಸಿಬೆಳೆಸುವ ಕೈಂಕರ್ಯಕ್ಕೆ ಸಿದ್ಧರಾಗಬೇಕಾದ ಅನಿವಾರ್ಯತೆಯಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಮಾತೃ ಭಾಷೆಯಾದ ಕನ್ನಡ ಸಾಹಿತ್ಯದಲ್ಲಿ ಇರುವ ಮೌಲ್ಯ, ಮಾನವೀಯತೆ, ಜೀವಪರ ಚಿಂತನೆಗಳು ಅರಿತುಕೊಂಡು ವಿಶ್ವಮಾನವನಾಗಲು ಯತ್ನಿಸಬೇಕೆಂದರು. ಪ್ರಾಚೀನ ಕವಿಗಳಾದ ಶ್ರೀವಿಜಯ, ಪಂಪ, ಪೊನ್ನ, ರನ್ನ ಮತ್ತು ಹನ್ನೆರಡನೆಯ ಶತಮಾನದ ಶರಣ-ಶರಣಿಯರ ಮೌಲಿಕ ವಚನಗಳು ಜಾತಿ-ಮತ-ಪಂಥ ಮೀರಿ ವೈಚಾರಿಕ ನೆಲೆಯಲ್ಲಿ ಶ್ರಮಿಸಿದರು.

ನಮ್ಮ ನಾಡಿನ ಸ್ವಾಭಿಮಾನ ಸಂಸ್ಕøತಿ ಹಿರಿಮೆ ಗರಿಮೆಯನ್ನು ಬಿತ್ತರಿಸುವ, ಪರಿಚಯಿಸುವ ಕೆಲಸ ನಡೆಯಬೇಕು. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಮತ್ತು ಭಾಷೆಯ ಪ್ರಾಚೀನತೆ ಸಾಹಿತ್ಯ ರಚನೆಯ ಉಲ್ಲೇಖಗಳು ಒಂದನೆಯ ಶತಮಾನದಷ್ಟು ಹಳೆಯದಾಗಿದೆ ಎಂಬುದರ ಆಧಾರದ ಮೇಲೆ ಶಾಸ್ತ್ರೀ ಸ್ಥಾನಮಾನ ದೊರೆಯಿತು. ಶಾಸ್ತ್ರೀ ಸ್ಥಾನ ಮಾನ ದೊರೆತ ಕನ್ನಡ ಭಾಷೆಗೆ 1.5 ಕೋಟಿ ಅನುದಾನ ಮಾತ್ರ ನೀಡುತ್ತದೆ, ಅದೇ ತಮಿಳು ಭಾಷೆ ಸಾಹಿತ್ಯಕ್ಕೆ 800 ಕೋಟಿ ನೀಡುತ್ತಿರುವುದು ಅಸಮಾನತೆಯಾಗಿದೆ. ಶಾಸನಗಳೂ, ಪ್ರಾಚೀನ ಕಾವ್ಯಗಳು ಪರಿಚಯಿಸುವಂತಹ ಕೆಲಸ ಇನ್ನುಷ್ಟು ನಡೆಯಬೇಕು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಒಂಬತ್ತನೆಯ ಶತಮಾನದ ಕವಿರಾಜಮಾರ್ಗ ಕೃತಿ ಆಶಯ ಹಾಗೂ ವಚನ ಸಾಹಿತ್ಯ ದಾಸ ಸಾಹಿತ್ಯ, ಕೀರ್ತನ ಸಾಹಿತ್ಯದ ಮೌಲ್ಯಗಳನ್ನು ತಿಳಿಸಬೇಕು. ಇಂದು ಆಡಳಿತ ಮಾಡುವ ಸರಕಾರಗಳು ಕನ್ನಡ ಸಾಹಿತ್ಯ ಭಾಷೆ, ಸಂಸ್ಕøತಿ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಯುವಪೀಳಿಗೆ ಕನ್ನಡ ನಾಡು ನುಡಿಯ ಜಾಗೃತಿ ಸ್ವಾಭಿಮಾನ ಬೆಳೆಸಿಕೊಳ್ಳಬೇಕೆಂದರು. ನೆಲ, ಜಲ, ಸಮಾಜ, ಸಂಸ್ಕøತಿ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಕನ್ನಡ ಓದುಗರಿಗೆ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು.

ಜೊತೆಗೆ ಭಾಷೆಯ ಮಹತ್ವ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ‘ವಸುದೇವ ಕುಟುಂಬಕಂ ಮತ್ತು ಸರ್ವಜನ ಸುಖಿನೋ ಭವಂತುತೆಯನ್ನು’ ತತ್ವ ಮೈಗೂಡಿಸಿಕೊಳ್ಳಬೇಕು. ಮನುಷ್ಯ ಜಾತಿ ತಾನೊಂದೆ ವಲಂ ಎಂಬ ಪಂಪನ ವಾಣಿಯಂತೆ ನಡೆಯಬೇಕಾಗಿದೆ. ಮಾನವೀಯತೆ ಸಮಾನತೆ, ಲಿಂಗ ಸಮಾನತೆ, ಕಾಯಕ ದಾಸೋಹ ಪದ್ದತಿಯನ್ನು ರೂಢಿಸಿಕೊಳ್ಳಬೇಕೆಂದು ಜಗತ್ತಿಗೆ ಸಾರಿದ ನಾಡು ಈ ಕಲ್ಯಾಣ ಕರ್ನಾಟಕ. ಕನ್ನಡ ಸಾಹಿತ್ಯಕ್ಕೆ ಶಾಸ್ತ್ರೀ ಭಾಷೆಯ ಸ್ಥಾನಮಾನ ಸಿಗುವಲ್ಲಿ ಕಲ್ಯಾಣ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಇದಲ್ಲದೆ ಸಮಾನತೆ ಸಮಾಜದಲ್ಲಿ ಸಮಾನತೆ ಬರುವರವರೆಗೆ ಮೀಸಲಾತಿ ಇರಲೆಬೇಕೆಂದು ಆಶಿಸಿದರು. ವೈಚಾರಿಕತೆ, ಮೌಲಿಕ ಚಿಂತನೆಗಳನ್ನು ಅರಿತು ಶ್ರೀಮಂತ ಕಲೆ, ವಾಸ್ತುಶಿಲ್ಪ, ಸಂಗೀತ, ನೃತ್ಯ, ಸಾಹಿತ್ಯ, ಸಂಸ್ಕøತಿ ಉಳಿಸಿ ಬೆಳೆಸೋಣ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರೊ. ಎಚ್.ಟಿ. ಪೋತೆ ಅವರು ಮಾತನಾಡುತ್ತಾ ಸಾಹಿತ್ಯ ಸಂಸ್ಕøತಿಗೆ ಆಗುವ ಅನ್ಯಾಯದ ವಿರುದ್ಧ ಧ್ವನಿಯೆತ್ತಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮಾಜದಲ್ಲಿ ಸಮಾನತೆ, ಸಹೋದರತೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದ ವೈಶಿಷ್ಟ್ಯತೆ, ವೈವಿದ್ಯತೆ ಅರಿತು ಹೆಮ್ಮೆಪಡಬೇಕಾಗಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ನಮ್ಮ ನಾಡಿನ ಶ್ರೀಮಂತಿಕೆ ಸಂಸ್ಕøತಿಯನ್ನು ಇನ್ನೊಬ್ಬರಿಗೆ ತಿಳಿಸಬೇಕಾದ ಅನಿವಾರ್ಯತೆ ಇದೆ. ಕನ್ನಡ ಭಾಷೆಯ ವೈಶಿಷ್ಟ್ಯ, ವೈವಿದ್ಯತೆಯನ್ನು ಉಳಿಸಿ ಬೆಳೆಸಬೇಕಾದುದು ಮತ್ತು ನಾಡು-ನುಡಿ ಉಳಿವಿಗಾಗಿ ಹೋರಾಟದ ಧ್ವನಿ ಮೊಳಗಿಸಬೇಕೆಂಬ ಆಶಯ ವ್ಯಕ್ತ ಪಡಿಸಿದರು.

ನಿರೂಪಣೆ ಕು. ಭಾಗ್ಯಶ್ರೀ, ವಂದನಾರ್ಪಣೆ ಶ್ರೀ ಮಲ್ಲಪ್ಪ ತೊಟ್ನಳ್ಳಿ, ಸ್ವಾಗತ ಡಾ. ವಸಂತ ನಾಶಿ ಮಾಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420