ರಟಕಲ್ ಗ್ರಾಮದ ಸ್ಟಾಪ್ ನರ್ಸ್ ಅಶ್ವಿನಿ ಭೇಲ್ಕರ್ ಗೆ ರಕ್ಷಣೆ ನೀಡಲು ಒತ್ತಾಯ

ಕಲಬುರಗಿ: ರಟಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಯೋಗಿ ಆಗಿರುವ ಅಶ್ವಿನಿ ಭೇಲ್ಕರ್ ಅವರಿಗೆ ಮತಾಂತರ ಮಾಡುತ್ತಿದ್ದೀರಿ ಎಂದು ಆರೋಪಿಸಿ ಬೆದರಿಕೆ ಹಾಕಿದ್ದು, ಕರ್ತವ್ಯಕ್ಕೆ ಅಡ್ಡಿ ಪಡಿಸಿ ಗ್ರಾಮದಲ್ಲಿ ಹಿಂದೂ ಧರ್ಮದ ಹೆಸರಲ್ಲಿ ಅಶಾಂತಿ ಸೃಷ್ಠಿಸುತ್ತಿರುವ ಯುವಕರನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕಠಿಣ ಕ್ರಮಕೈಗೊಳ್ಳಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ಹೇಳಿದರು.

ಫೆ. 22 ರಂದು ಸರಕಾರಿ ಕಟ್ಟಡದಲ್ಲಿ ವಾಸಿಸಲು ಹೋಗುವುದಕ್ಕಿಂತ ಮೊದಲು ಆ ದಿನ ಸಂಜೆ ತಮ್ಮ ಸಂಪ್ರದಾಯದ ಪ್ರಕಾರ ಸಂಗಡಿಗ ರೊಂದಿಗೆ ಪೂಜೆ ಮತ್ತು ಪ್ರಾರ್ಥನೆ ಮಾಡುವಾಗ ಹಿಂದೂ ಜಾಗೃತ ಸೇನೆಯ ತಾಲೂಕ ಘಟಕದ ಅಧ್ಯಕ್ಷ ಮತ್ತು ಇತರ ಮುಖಂಡರ ನೇತೃತ್ವದ ತಂಡ ಬೂಟುಗಾಲಿನಿಂದ ಅವರು ಪೂಜೆ ಮಾಡುತ್ತಿರುವ ರೂಮಿಗೆ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಮಾತಾಡಿ ಅವರಿಗೆ ಪೂಜೆ ಮತ್ತು ಪ್ರಾರ್ಥನೆ ಮಾಡದಂತೆ ತಡೆದುದ್ದಲ್ಲದೆ ಅವರನ್ನು ರೂಮಿನಿಂದ ಹೊರದೂಡಿದರು.

ಆರೋಗ್ಯ ಕೇಂದ್ರದಲ್ಲಿ ಕಾರ್ಯಾನಿರ್ವಹಿಸುತ್ತಿರುವ ನರ್ಸ್ ಗೆ ಮತಾಂತರ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರಿಗೆ ಬೆದರಿಕೆ ಹಾಕಿದರು. ಬೆಳಿಗ್ಗೆ ಕೆಲಸಕ್ಕೆ ಹೋಗುವಾಗ ತಡೆದು ಮತ್ತೂ ಅವಾಚ್ಯ ಶಬ್ದಗಳಿಂದ ಮಾತಾಡಿ ಜೀವ ಬೆದರಿಕೆ ಹಾಕಿದ್ದಾರೆ. ಅವರ ಪ್ರಾರ್ಥನೆಯಲ್ಲಿ ಭಾಗವಹಿಸಿದವರ ಹೇಳಿಕೆಯ ಪ್ರಕಾರ ತಾವ್ಯಾರು ಮತಾಂತರ ಹೊಂದಲು ಬಂದಿರುವುದಿಲ್ಲ ಪೂಜೆ ಮತ್ತು ಪ್ರಾರ್ಥನೆ ಮಾಡಲು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

ಹೀಗಿರುವಾಗಲೂ ಹಿಂದೂ ಜಾಗೃತ ಸೇನೆಯವರು ಬೇಕಂತಲೇ ಷಡ್ಯಂತರ ಮಾಡಿ ಅವಳಿಗೆ ಬೆದರಿಕೆ ಹಾಕುತ್ತಿದ್ದಾರೆ ಇದು ಖಂಡನೀಯ. ಅಶ್ವಿನಿಯವರಿಗೆ ರಕ್ಷಣೆ ಕೊಡಬೇಕು, ಅಲ್ಲದೆ ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ದೂರು ದಾಖಲಾಗಿರುವ ಅವರೆಲ್ಲರನ್ನು ಕೂಡಲೇ ಬಂಧಿಸಬೇಕು, ಆರೋಪಿಗಳನ್ನು ಬಂಧನವಾಗಿಲ್ಲವಾದ್ದರಿಂದ ಅಶ್ವಿನಿಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಡಳಿತ ತಕ್ಷಣ ಕಾರ್ಯಪ್ರವೃತ್ತವಾಗಿ ತಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಧರ್ಮದ ಹೆಸರಲ್ಲಿ ಶಾಂತಿ ಕದಡುತ್ತಿರುವ ಕೋಮುವಾದಿಗಳನ್ನು ನಿಯಂತ್ರಿಸಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

4 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

12 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

13 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

16 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420