ಬ್ರಹ್ಮಶ್ರೀ ನಾರಾಯಣ ಗುರು ಸಾಮಾಜಿಕ ಪರಿವರ್ತನೆಯ ಹರಿಕಾರ:ಎಚ್.ಬಿ.ಪಾಟೀಲ

ಕಲಬುರಗಿ: ತುಳಿತಕ್ಕೆ ಒಳಗಾದ ಶೋಷಿತರ, ದೀನರ, ಬಡವರ ಉದ್ಧಾರವನ್ನು ಮಾಡುತ್ತಾ, ಜಾತೀಯತೆ, ಅಸ್ಪೃಶ್ಯತೆ ನಿರ್ಮೂಲನೆಯಂತಹ ಮುಂತಾದ ಸಮಾಜ ಸುಧಾರಣೆಯ ಕಾರ್ಯಗಳನ್ನು ಮಾಡಿದ ಬ್ರಹ್ಮಶ್ರೀ ನಾರಾಯಣ ಗುರು ಶ್ರೇಷ್ಠ ಸಮಾಜ ಸುಧಾರಕರು, ಮಹಾನ ಮಾನವತಾವಾದಿ, ತತ್ವಜ್ಞಾನಿಯಾಗಿ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುವ ಮೂಲಕ ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದಾರೆಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ಅವರು ನಗರದ ಆಳಂದ ರಸ್ತೆಯ, ದೇವಿ ನಗರದಲ್ಲಿರುವ ’ಮಲ್ಲಿನಾಥ ಮಹಾರಾಜ ಶಾಲೆ’ಯಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ’ಬ್ರಹ್ಮಶ್ರೀ ನಾರಾಯಣ ಗುರು ಅವರ ೧೬೫ನೇ ಜಯಂತಿ’ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ನಂತರ ಮಾತನಾಡುತ್ತಿದ್ದರು.

ಆಧ್ಯಾತ್ಮಿಕತೆ, ಧರ್ಮ, ಸಂಸ್ಕೃತಿ, ಸಮಾಜ ಸುಧಾರಣೆಗಾಗಿ ಎಲ್ಲೆಡೆ ಸಂಚರಿಸಿ, ಜನಜಾಗೃತಿಯನ್ನು ಮೂಡಿಸಿದರು. ಸಂಪ್ರದಾಯ, ಕಟ್ಟಳೆಗಳನ್ನು ಧಿಕ್ಕರಿಸಿ, ಎಲ್ಲಡೆ ವೈಚಾರಿಕತೆಯನ್ನು ಮೂಡಿಸಲು ಪ್ರಯತ್ನಿಸಿದರು. ಹಿಂದುಳಿದ, ಬಡವರ್ಗದ ಮಕ್ಕಳಿಗಾಗಿ ಶಿಕ್ಷಣವನ್ನು ನೀಡುವ ಮೂಲಕ ಬಡವರ ಆಶಾಕಿರಣವಾದರು. ಜಾತಿ ಸಂಕೋಲೆಗಳಿಂದ ತುಂಬಿದ್ದ ಕೇರಳ ಸಮಾಜದಲ್ಲಿ ಹೊಸ ಅಲೆ ಸೃಷ್ಟಿಸಿ, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಕಾರ್ಯನಿರ್ವಹಿಸಿದರೆಂದು ಅವರ ಜೀವನ, ಕೊಡುಗೆಯನ್ನು ವಿವರಿಸಿದರು.

ಶಾಲೆಯ ಮುಖ್ಯಸ್ಥ ಅಮರ ಬಂಗರಗಿ ಮಾತನಾಡಿ, ನಾರಾಯಣ ಗುರು ಅವರು ಸಾಮಾಜಿಕ ಅಗ್ರಗಣ್ಯರ ಚಿಂತಕರಲ್ಲಿ ಪ್ರಮುಖರಾಗಿದ್ದಾರೆ. ಆಧ್ಯಾತ್ಮಿಕ ಗುರುವಾಗಿ ನೀತಿಗಳನ್ನು ನೀಡಿದ್ದಾರೆ. ಸಮಾಜಕ್ಕೆ ಗುರುವಾಗಿ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ದೊರಕಿಸಿಕೊಟ್ಟಿದ್ದಾರೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ, ಚಂಪಾಕಲಾ ನೆಲ್ಲೂರ, ನಿಂಗಮ್ಮ ಬಿರಾದಾರ, ಗಿರಿಜಾ ರ‍್ಯಾಕಾ, ಶಾರದಾಬಾಯಿ ಗೌಳಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420