ಕಲಬುರಗಿ: ನಗರದ ಗುಬ್ಬಿ ಕಾಲೋನಿಯ ಉದ್ಯಮಿ ಸೋಮಶೇಖರ್ ಪಾಟೀಲ್ ಅವರ ಮೇಲೆ ನಗರದ ಪಶು ಆಸ್ಪತ್ರೆ ಮುಂದೆ ಅಪರಿಚಿತರು ಹಲ್ಲೆ ಮಾಡಿ 1.50 ಲಕ್ಷ ರೂ.ಗಳ ಮೌಲ್ಯದ ಚಿನ್ನದ ಚೈನ್ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಪೂರ್ ಠಾಣೆಯ ಪೋಲಿಸರು ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಇಂದಿರಾನಗರದ ಉದಯಕುಮಾರ್ ತಂದೆ ತಿಪ್ಪಣ್ಣ ದೊಡ್ಡಮನಿ (29), ಲೋಕೇಶ್ ತಂದೆ ಸುಭಾಷ್ ಶಿಂಧೆ (23), ಫಿಲ್ಟರ್ ಬೆಡ್ನ ಅಭಿಷೇಕ್ ಅಲಿಯಾಸ್ ಪೋಗೋ ತಂದೆ ಹುಣಚಪ್ಪ ಪೂಜಾರಿ(20) ಹಾಗೂ ಇಂದಿರಾನಗರದ ದರ್ಶನ್ ತಂದೆ ಗಿರೆಪ್ಪಾ ಶಿಂಗೆ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 1.50 ಲಕ್ಷ ರೂ.ಗಳ ಮೌಲ್ಯದ 30 ಗ್ರಾಮ್ ತೂಕದ ಚಿನ್ನದ ಚೈನ್, ಕೃತ್ಯಕ್ಕೆ ಬಳಸಿದ 14 ಲಕ್ಷ ರೂ.ಗಳ ಮೌಲ್ಯದ ಒಂದು ಮಾರುತಿ ಎರಿಟಿಗಾ ಕಾರು ಸೇರಿ ಒಟ್ಟು 15,500,000 ರೂ.ಗಳ ಮೌಲ್ಯದ್ದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಪಿಐ ಘಾಳಪ್ಪ ಪೆನಾಗ್ ಅವರ ನೇತೃತ್ವದಲ್ಲಿ ಪಿಎಸ್ಐ ಶಾಮಸುಂದರ್, ಸಿಬ್ಬಂದಿಗಳಾದ ಶಿವಪ್ರಕಾಶ್, ಕೇಸುರಾಯ್, ವಿಶ್ವನಾಥ್, ರಾಮು ಪವಾರ್, ಶಶಿಕಾಂತ್, ನವೀನಕುಮಾರ್, ಶಿವಶರಣಪ್ಪ, ಚನ್ನವೀರೇಶ್ ಅವರು ಕಾರ್ಯಾಚರಣೆ ಕೈಗೊಂಡು ದರೋಡೆಕೋರರನ್ನು ಬಂಧಿಸಿದರು. ಕಾರ್ಯಾಚರಣೆಗೆ ನಗರ ಪೋಲಿಸ್ ಆಯುಕ್ತ ಚೇತನ್ ಆರ್., ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…