ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ನಗರದ ಜಯನಗರ ಶಿವಮಂದಿರದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಮಾ.8 ರಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಅದ್ದೂರಿಯಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ಜರುಗುವುದು ಎಂದು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 5 ಗಂಟೆಗೆ ಶಿವನಿಗೆ ರುದ್ರಾಭಿಷೇಕ ನಡೆಯುವುದು.ನಂತರ ಭಕ್ತಾದಿಗಳಿಂದ ಅಭಿಷೇಕ ನಡೆಯುತ್ತವೆ.ಬೆಳಿಗ್ಗೆ 10:30ಕ್ಕೆ ಟ್ರಸ್ಟ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಬಡಾವಣೆಯ ಮಹಿಳೆಯರ ನೇತೃತ್ವದಲ್ಲಿ ವಿಶೇಷವಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ನಡೆಯುವುದು. ಮಂಗಲ ಕಾರ್ಯ ಕುರಿತು ಹಾಗೂ ಧಾರ್ಮಿಕ ವಿಧಿ ವಿಧಾನಗಳ ಬಗ್ಗೆ ಕವಲಗಾ(ಕೆ) ವಿರಕ್ತ ಮಠದ ಷ.ಬ್ರ.ಪೂಜ್ಯ ಶ್ರೀ ಷಣ್ಮುಖ ಶಿವಯೋಗಿ ಸ್ವಾಮೀಜಿ ತಿಳಿಸಿಕೊಡುವರು.ಇದೇ ಸಮಯದಲ್ಲಿ ಅವರ ಪಾದ ಪೂಜೆ ನೆರವೇರುವುದು.
ಅಂದು ಸಂಜೆ ವಿಶೇಷ ಪೂಜೆ ನಂತರ ರಾತ್ರಿ 8 ಗಂಟೆಗೆ ಜಾಗರಣೆ ಅಂಗವಾಗಿ ಭಜನಾ ತಂಡದ ವತಿಯಿಂದ ಭಕ್ತಿ ಗೀತೆಗಳು, ಭಜನೆ ಹಾಗೂ ಕಲಾವಿದ ಸಿ.ಎಸ್. ಮಾಲಿಪಾಟೀಲ ಅವರಿಂದ ಭಾವಗೀತೆಗಳ ಸಂಗೀತ ಸಂಜೆ ನಡೆಯಲಿದೆ.ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಅವರು ಶಿವಲೀಲೆ ಕುರಿತು ಮಾತನಾಡುವರು.
ಈ ಸಂದರ್ಭದಲ್ಲಿ ಅನೇಕ ಗಣ್ಯರು, ಸಾಹಿತಿಗಳು ಉಪಸ್ಥಿತರಿರುವರು.ಕಾರಣ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯನಗರ ಶಿವಮಂದಿರಕ್ಕೆ ಆಗಮಿಸಬೇಕು ಎಂದು ಅವರು ಕೋರಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…