ಆಳಂದ ದರ್ಗಾದ ಆವರಣದಲ್ಲಿ ಶಿವಲಿಂಗ ಪೂಜೆಗಾಗಿ ವ್ಯಾಪಕ ಬಂದೋಬಸ್ತ್: ಎಸ್.ಪಿ

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಎನ್ನಲಾಗುತ್ತಿರುವ ರಾಘವಚೈತನ್ಯ ಶಿವಲಿಂಗಕ್ಕೆ ಇಂದು ಮಹಾಶಿವರಾತ್ರಿ ನಿಮಿತ್ತ ಪೂಜೆ ಸಲ್ಲಿಕೆಗೆ ಹೈ ಕೋರ್ಟ್ 15 ಜನರಿಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಾಲ್ಲೂಕಿನದ್ಯಂತ ಮಧ್ಯಮಾರಾಟ ನಿಷೇಧಿಸಿದೆ. ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಕಲ್ಪಿಸಿದ್ದೇವೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೈ ಅವರು ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶದ ಅನ್ವಯ ಎಲ್ಲರೂ ನಡೆದುಕೊಳ್ಳಬೇಕು ಎಂದು ಜನರಲ್ಲಿ ಮನವಿ ಮಾಡಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಮೂರು ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳು, 15 ಡಿವೈಎಸ್‍ಪಿಗಳು ಸೇರಿದಂತೆ 1500 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು 13ಕ್ಕೂ ಅಧಿಕ ಶಾಂತಿ ಸಭೆಗಳನ್ನು ಸಹ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಹಲವರನ್ನು ಬಾಂಡ್ ಓವರ್ ಮಾಡಲಾಗಿದ್ದು, ಇನ್ನೂ ಕೆಲವರಿಗೆ ಗಡಿಪಾರು ಸಹ ಮಾಡಲು ಹೇಳಿದ್ದೇವೆ. ಆಳಂದ್ ಪಟ್ಟಣದ ಜನರು ಪರಸ್ಪರರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಹೀಗಾಗಿ ಹೊರಗಡೆ ವ್ಯಕ್ತಿಯಿಂದ ಪ್ರಚೋದನೆ ಆಗದಂತೆ ಹೇಳಿದ್ದೇವೆ. ಅಷ್ಟೇ ಅಲ್ಲ ಏನೇ ಸಮಸ್ಯೆಯಾದರೂ ನಮ್ಮ ಗಮನಕ್ಕೆ ತರಲು ತಿಳಿಸಿದ್ದೇವೆ ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳಿಂದ ಪ್ರಚೋದನೆ ಆಗದಂತೆ ಸೂಚಿಸಿದ್ದೇವೆ. ಇನ್ಜು ಆಳಂದ್ ಮುಖಾಂತರ ಬೇರೆಡೆಗೆ ಹೋಗುವ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ ಅವರು, ಉಭಯ ಸಮುದಾಯದ ಧರ್ಮಗುರುಗಳಿಗೆ ಶಾಂತಿಯುತವಾಗಿ ಧಾರ್ಮಿಕ ಆಚರಣೆಗೆ ಕೇಳಿಕೊಂಡಿದ್ದು, ಅವರೂ ಸಹ ಬೆಂಬಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420