ಕಲಬುರಗಿ: ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ವಾಯು ವಿಹಾರ ಬಳಗಕ್ಕೆ ಆಗಮಿಸಿದ ದೇವಿಂದ್ರಪ್ಪ ಮರತೂರ ಅವರನ್ನು ಸಿದ್ಧರಾಮೇಶ್ವರ ವೃತ್ತ ವಾಯು ವಿಹಾರ ಬಳಗದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಅವರು ಅಧಿಕಾರ ಸಿಗಲು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ಜಿಲ್ಲೆಯ ಸಚಿವರು ಮತ್ತು ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಸಹಾಯ ಸಹಕಾರದಿಂದ ಅಧಿಕಾರ ಸಿಕ್ಕಿದೆ ಎಂದರು.
ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸುಮಾರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾದ ದೇವಿಂದ್ರಪ್ಪ ಮರತೂರ ಸಿಕ್ಕಿದ್ದು ಸಂತೋಷವಾಗಿದೆ. ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹಕಾರದಿಂದ ಉನ್ನತ ಮಟ್ಟದ ರಾಜ್ಯ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರು ಆಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ವೀರಣ್ಣಗೌಡ ಪಾಟೀಲ ಮಲ್ಲಾಬಾದ ನಮ್ಮ ವಾಯು ವಿಹಾರ ಬಳಗ ಸದಸ್ಯರಿಗೆ ಸರ್ಕಾರ ಗುರುತಿಸಿ ಉನ್ನತ ನೀಡಿದೆ ಬಹಳಷ್ಟು ಹೆಮ್ಮೆಯ ವಿಷಯ ಎಂದು ಹೇಳಿದರು.
ವಾಯು ವಿಹಾರ ಬಳಗದವರಾದ ಹಣಮಂತರಾಯಗೌಡ ಉದನೂರ, ಹುಲ್ಲಕಂಠರಾಯ ಎಸ್.ಎಂ. ಅರಳಗೂಂಡಗಿ, ಶಾಂತಪ್ಪ ನಿಂಬಾಳ, ದೇವಿಂದ್ರಪ್ಪ ಕೋಳಕೂರ, ಶಿರೆಡ್ಡಿ, ಗೋಪಾಲ ದೋಡಮನಿ, ನಾನಾಗೌಡ ಕೂಡಿ, ನಾಸಿ ನಾಯಕಲ್, ತುಕಾರಾಮ ಪಾಟೀಲ, ಮಹಾಂತೇಶ ಪಾಟೀಲ, ಶಿವಶಂಕರ ಬಿರಾದಾರ, ಶಿವಶರಣಪ್ಪ ಕೋಬಾಳ, ಮಾರಾಯ, ಮಹಾಂತಗೌಡ, ಶ್ರೀಶೈಲ ಭೂಳೂರಗಿ, ಪ್ರಭು ಗೊಬ್ಬರ, ಶಿವುಕುಮಾರ ಬಿದರಿ, ಶರಣಕುಮಾರ ಬಿಲ್ಲಾಡ, ನಾಗಣ್ಣಗೌಡ, ಚೌದ್ರಿ, ಬಿ.ಎಂ.ಪಾಟೀಲ ಕಲ್ಲೂರ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…