ವಿಶ್ವದ ಮಹಾನ್ ಶಕ್ತಿ ಮಹಿಳೆ: ಪ್ರೊ ಯಶವಂತರಾಯ ಅಷ್ಠಗಿ

ಕಲಬುರಗಿ: ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಸವಾಲು, ಸಮಸ್ಯೆಗಳು ಹೆಚ್ಚಾಗಿದ್ದು, ಅವುಗಳನ್ನು ಎದುರಿಸಿ ಹಿಂದೆ ನೋಡದೇ ಮುನ್ನಡೆಯುವ ಸಾಮರ್ಥ್ಯ ಅವುಗಳಿಗಿರುವ ಕಾರಣ ಮಹಿಳೆ ವಿಶ್ವದ ಮಹಾನ್ ಶಕ್ತಿಯಾಗಿದ್ದಾಳೆ ಎಂದು ಚಿಂತಕ ಹಾಗೂ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ. ಯಶವಂತರಾಯ ಅಷ್ಠಗಿ ಅಭಿಪ್ರಾಯ ಪಟ್ಟರು.

ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಎಲ್ಲ ಹೆಣ್ಣುಮಕ್ಕಳು ವಿದ್ಯೆ ಕಲಿಯುತ್ತಿದ್ದಾರೆ. ಆಧುನಿಕ ಭಾರತದಲ್ಲಿ ಮೊದಲ ಬಾರಿಗೆ ವಿದ್ಯೆ ನೀಡಿದವರು.

ಸಾವಿತ್ರಿಬಾಯಿ ಫುಲೆ ಅವರು. ಅನೇಕರ ವಿರೋಧದ ಮಧ್ಯೆಯೂ ಹೆಣ್ಣು ಮಕ್ಕಳಿಗಾಗಿ ಶಾಲೆ ತೆರೆದು ಕಲಿಸಲು ತನ್ನ ಜೀವನ ಮುಡಿಪಾಗಿಟ್ಟ ದೇಶದ ಮೊಟ್ಟ ಮೊದಲ ಶಿಕ್ಷಕಿ.
ಇಂದು ಮಹಿಳೆಯರ ಉನ್ನತಿಗಾಗಿ ಹೋರಾಡಿದ ಸಾವಿತ್ರಿಬಾಯಿಯವರನ್ನು ಹಾಗೂ ಮಾತೆ ರಮಾಬಾಯಿ ಅಂಬೇಡ್ಕರ್ ರವರ ತ್ಯಾಗ ಮತ್ತು ತಾಳ್ಮೆ ಎಲ್ಲರೂ ಸ್ಮರಿಸುವ ಅಗತ್ಯವಿದೆ ಎಂದು ಪ್ರೊ. ಅಷ್ಠಗಿ ನುಡಿದರು.

ಕರ್ನಾಟಕ ಸಮತಾ ಸೈನಿಕ ದಳದ ವಿಭಾಗೀಯ ಅಧ್ಯಕ್ಷರಾದ ಸಂಜೀವ ಟಿ ಮಾಲೆ ಸ್ವಾಗತಿಸಿ- ಪ್ರಾಸ್ತಾವಿಕ ಮಾತನಾಡಿ, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಮಹಿಳಾ ಪರ ಕಾರ್ಯಕ್ರಮಗಳ ಆಯೋಜನೆಯ ಅಗತ್ಯವಿದೆ ಎಂದರು.

ಸಾಹಿತಿಗಳಾದ ಧರ್ಮಣ್ಣ ಧನ್ನಿ ಹಾಗೂ ಡಾ.ಕೆ. ಗಿರಿಮಲ್ಲ ಮಾತನಾಡಿ, ಮಹಿಳಾ ಸಮಾನತೆಗಾಗಿ ಬುದ್ಧ, ಬಸವ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ರವರ ಹೋರಾಟ ಅನುಪಮವಾದುದು. ಮಹಿಳೆಯರ ಅಭ್ಯುದಯಕ್ಕೆ ಶ್ರಮಿಸಿದ ಇಂತಹ ಮಹಿಳಾವಾದಿಯನ್ನು ನಾವು ಎಂದಿಗೂ ಮರೆಯಬಾರದೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಅಂಬೇಡ್ಕರ್ ಸೇನೆಯ ಮಹಿಳಾ ಘಟಕದ ಅಧ್ಯಕ್ಷರಾದ ಶೀಲಾ ಗಾಯಕವಾಡ ವಹಿಸಿದ್ದರು. ಜೈಶೀಲಾ ಬೊದಲೆ, ಧರ್ಮಣ್ಣ ಕೋನೆಕರ್,ಕೆ ಎಸ್ ಎಸ್ ಡಿ ಜಿಲ್ಲಾಧ್ಯಕ್ಷ ಈರಣ್ಣ ಜಾನೆ,ಜಾನಪದ ಕಲಾವಿದ ಎಂ ಎನ್ ಸುಗಂಧಿ, ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾರತಿಬಾಯಿ ಕಾಂಬಳೆ, ಶಿವಲಿಂಗಮ್ಮ ಸಾವಳಗಿ, ಶಾಂತಾಬಾಯಿ, ಎಸ್.ಯಶೋಧಾ ಕುಸನೂರ, ಮಲ್ಲಮ್ಮ ಜಗತಿ, ಕಾವೇರಿ ಗೋರಂಪಳ್ಳಿ, ಶಿವಮೂರ್ತಿ ಬಲಿಚಕ್ರವರ್ತಿ,ಪವನ್ ಧನಕರ, ಖತಲಪ್ಪಾ ಕಟ್ಟಿಮನಿ, ಲಲಿತಾಬಾಯಿ ಬಿಲಕಲ್, ಅಪ್ಪಾರಾವ ಭಾವಿಮನಿ, ಮಹಾದೇವ ನಾಟಿಕರ, ಮುತ್ತಣ್ಣ ಡೆಂಗಿ, ಮಾರುತಿ ಲೇಂಗಟಿ,ಭರತ್ ಹುಂಡೆಕಾರ ಸೇರಿದಂತೆ ಸಂಘಟನೆಯ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರಾದ ಶಾಂತಾಬಾಯಿ ಎಸ್ ಮಾಲೆ, ಸುಜಾತಾ ಆರ್ ಸೂಗೂರ, ರಾಜೇಶ್ವರಿ ಶಿವಶರಣಪ್ಪ, ವಿಜಯಲಕ್ಷ್ಮಿ ನರಸಯ್ಯ ಕಲಾಲ, ಮಹಾದೇವಿ ಎಚ್ ಭೀಮಪೂರೆ ಅವರನ್ನು ಸತ್ಕರಿಸಲಾಯಿತು. ಅಪ್ಪಾರಾವ ಭಾವಿಮನಿ ನಿರೂಪಿಸಿದರು. ಮಹಾದೇವ ನಾಟಿಕರ ವಂದಿಸಿದರು.

ವಿಶ್ವಸಂಸ್ಥೆಯು ಈ ವರ್ಷದ ಧ್ಯೇಯವಾಕ್ಯವನ್ನು ‘ಮಹಿಳೆಯರಲ್ಲಿ ಹೂಡಿಕೆ ಮಾಡಿ: ಪ್ರಗತಿಯನ್ನು ವೇಗಗೊಳಿಸಿ’ ಆರ್ಥಿಕ ಅಸಾಮರ್ಥ್ಯವನ್ನು ನಿಭಾಯಿಸುವ ಗುರಿಯನ್ನು ಹೊಂದಿದೆ. ಇದೇ ವರ್ಷದ ಪ್ರಚಾರದ ಅಭಿಯಾನ ‘ಇನ್‌ಸ್ಪೈರ್ ಸೇರ್ಪಡೆ ಆಗಿದೆ. ಪ್ರೊ ಯಶವಂತರಾಯ ಅಷ್ಠಗಿ. ಚಿಂತಕರು ಹಾಗೂ ಜಿಲ್ಲಾ ಗೌರವ ಕಾರ್ಯದರ್ಶಿಗಳು, ಕಲಬುರಗಿ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420