ಸುರಪುರ: ಕಡ್ಲಪ್ಪನವರ ಮಠದಲ್ಲಿ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ 48ನೇ ಪುಣ್ಯಸ್ಮರಣೋತ್ಸವ ನಾಳೆಯಿಂದ

ಸುರಪುರ :ನಗರದ ಕಬಾಡಗೇರಾ ನಿಷ್ಠಿ ಕಡ್ಲಪ್ಪನವರ ವಿರಕ್ತ ಮಠದಲ್ಲಿ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ 48ನೆ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶರಣ ಚರಿತಾಮೃತ ಪ್ರವಚನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ(ಮಾ11) ಪ್ರಾರಂಭವಾಗಲಿವೆ.
ಮಾ11 ರಿಂದ 19ವರೆಗೆ ನಡೆಯಲಿರುವ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಸೋಮವಾರದಂದು ಸಾಯಂಕಾಲ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಮಠ ಖೇಳಗಿ ಉದ್ಘಾಟಿಸುವರು ಮಠದ ಪೀಠಾಧಿಪತಿಗಳಾದ ಪ್ರಭುಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು ಶಿವಶರಣಯ್ಯಶಾಸ್ತ್ರಿಗಳು ಚಿಣಮಗೇರಿ ಪ್ರವಚನ ನಡೆಸಿಕೊಡಲಿದ್ದಾರೆ ಆಕಾಶವಾಣಿ ಕಲಾವಿದ ಶರಣುಕುಮಾರ ಯಾಳಗಿ ಸಂಗೀತ ಸೇವೆ ಹಾಗೂ ರಾಜಶೇಖರ ಗೆಜ್ಜಿ ತಬಲಾ ಸಾಥ ನೀಡುವರು.

ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಪ್ರಯುಕ್ತ ಇಷ್ಟಲಿಂಗ ಪೂಜೆ, ರುದ್ರಾಕ್ಷಿಧಾರಣೆ,ಉಚಿತ ಆರೋಗ್ಯ ತಪಾಸಣೆ ಮಹಾರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ, ಷಟಸ್ಥಲ ಧ್ವಜಾರೋಹಣ,ಭರತ ನಾಟ್ಯ,ಸಾಧಕರಿಗೆ ಗೌರವ ಶ್ರೀರಕ್ಷೆ,ಧರ್ಮಸಭೆ ಹಾಗೂ ಸಂಗೀತ ದರ್ಬಾರ ಮುಂತಾದ ಕಾರ್ಯಕ್ರಮಗಳು ನೆರವೇರಲಿವೆ ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾ18 ರಂದು ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ನಡೆಯಲಿದೆ. ಮಾ17 ರಂದು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ,ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ,ಪ್ರಬಂಧ ಸ್ಪರ್ರ್ಧೆ ನಡೆಯಲಿವೆ ಅಂದು ಸಾಯಂಕಾಲ ಸಾಧಕರಿಗೆ ಶ್ರೀರಕ್ಷೆ ಕಾರ್ಯಕ್ರಮ ನಡೆಯಲಿದ್ದು ಶ್ರೀ ಮುರುಘೇಂದ್ರ ಶಿವಯೋಗಿಗಳ ವಿರಕ್ತಮಠ ಯಡ್ರಾಮಿಯ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು ಕೊಡೇಕಲ್ ದುರದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಮಹಾಸ್ವಾಮಿಗಳು ಸಮ್ಮುಖ ವಹಿಸುವರು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು.

ಮಾ18 ರಂದು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಮಾ19 ರಂದು ಬೆಳಿಗ್ಗೆ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಮತ್ತು ಸಹಸ್ರ ಬಿಲ್ವಾರ್ಚನೆ, ಸಾಯಂಕಾಲ 7ಗಂಟೆಗೆ ಧರ್ಮಸಭೆ, ಶರಣ ಚರಿತಾಮೃತ ಪ್ರವಚನ ಮಹಾ ಮಂಗಲ, ಕಾರ್ಯಕ್ರಮ ನಡೆಯಲಿವೆ ದೇವಾಪುರ ಜಡೆಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಿವಮೂರ್ತಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು ನಂದಿಮಠ ವಡವಡಗಿಯ ವೀರಸಿದ್ಧ ಮಹಾಸ್ವಾಮಿಗಳು ಸಾನಿಧ್ಯ, ಪ್ರಭುಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು ಗಜೇಂದ್ರಗಡದ ಕಾಲಜ್ಞಾನಮಠದ ಶರಣಬಸವೇಶ್ವರ ಮಹಾಸ್ವಾಮಿಗಳಿಮದ ಉಪಾದೇಶಮೃತ ಸುರಪುರ ಸಂಸ್ಥಾನದ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಉದ್ಘಾಟಿಸುವರು ನ್ಯಾಯವಾದಿ ಶರಣಬಸಪ್ಪ ನಿಷ್ಠಿ ಜಾಹಗೀರದಾರ, ಕೆವೈ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ.ಸುರೇಶ ಸಜ್ಜನ್, ನಗರಸಭೆ ಸದಸ್ಯ ವೇಣುಮಾಧವ ನಾಯಕ ಉಪಸ್ಥಿತಿ. ರಾತ್ರಿ ಗಂಟೆಯಿಂದ ಆಕಾಶವಾಣಿ ಕಲಾವಿದ ಆಮಯ್ಯಸ್ವಾಮಿ ಹಿರೇಮಠ ಅಧ್ಯಕ್ಷತೆಯಲ್ಲಿ ಸಂಗೀತ ದರ್ಬಾರ ಕಾರ್ಯಕ್ರಮಗಳು ನಡೆಯಲಿವೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

8 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

11 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

16 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

18 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420