ಅಪಘಾತದಲ್ಲಿ 6 ಜನ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿ ಸಾಂತ್ವನ ಹೇಳಿದ ಪ್ರಿಯಾಂಕ್ ಖರ್ಗೆ

0
75

ಚಿತ್ತಾಪುರ: ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.

ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಆರು ಜನರ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.

Contact Your\'s Advertisement; 9902492681

ರಸ್ತೆ ಅಪಘಾತದಲ್ಲಿ ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಈ‌ ಸಂದರ್ಭದಲ್ಲಿ ಮಹೆಮೂದ್ ಸಾಹೇಬ್, ಶಿವಾನಂದ ಪಾಟೀಲ್, ವೀರನಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here