ಕಲಬುರಗಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಸಿರಿಧಾನ್ಯ ಕಾರ್ಯಗಾರ

ಕಲಬುರಗಿ; ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ 1 ಮತ್ತು 2, ಶರಣಬಸವ ವಿಶ್ವವಿದ್ಯಾಲಯ ಹಾಗೂ ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಹೈದ್ರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿ “ಸಿರಿಧಾನ್ಯ ಕಾರ್ಯಗಾರವು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯಲ್ಲಿ ನಡೆಯಿತು.

ಕಾರ್ಯಕ್ರಮವು ಉದ್ಘಾಟಿಸಿದ ಕೃಷಿಕ ಸಜಾಜದ ಜಿಲ್ಲಾಧ್ಯಕ್ಷರಾದ ಡಾ. ಸಿದ್ರಾಮಪ್ಪಾ ಪಾಟೀಲ್ ಧಂಗಾಪೂರರವರು ಮಾತನಾಡಿ ಸಿರಿಧಾನ್ಯ ಉಪಯೋಗಗಳು ಗ್ರಾಮದ ಎಲ್ಲಾ ರೈತರಿಗೂ ಹಾಗೂ ನಗರ ವಾಸಿಗಳಿಗೂ ಇದರ ಆರೋಗ್ಯದ, ದೈಹಿಕ ದೃಡತೆಯ ಮಾಹಿತಿ ತಲುಪಲು ಕೃಷಿ ವಿಶ್ವವಿದ್ಯಾಲಯ, ಕೆವಿಕೆಗಳು, ಕೃಷಿ ಇಲಾಖೆ ಹಾಗೂ ಸಿರಿಧಾನ್ಯ ಸಂಸ್ಥೆಗಳು ಹೆಚ್ಚು ಚಟುವಟಿಕೆಗಳನ್ನು ರೂಪಿಸಿರುವುದನ್ನು ಸಂತೋಷದ ಬೆಳವಣಿಗೆ ಎಂದು ಹರ್ಷವ್ಯಕ್ತಪಡಿಸಿದರು. ಕೃಷಿಕ ಸಮಾಜವು ಸರ್ಕಾರದ ಕೃಷಿ ಪೂರ್ವಭಾವಿ ಬಜೆಟನಲ್ಲಿ ಸಿರಿಧಾನ್ಯ ಹಾಗೂ ಒಣ ಬೇಸಾಯಕ್ಕೆ ಒತ್ತು ನೀಡುವಂತೆ ಹಲವು ಯೋಜನೆಗಳನ್ನು ಜಾರಿಗೆ ತರಲು ಉತ್ತಮ ಸಲಹೆಗಳನ್ನು ನೀಡಿದೆ ಎಂದು ತಿಳಿಸಿದರು.

ಡಾ. ಎಂ.ಎಂ. ಧನೋಜಿ, ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಕಲಬುರಗಿರವರು ಮಾತನಾಡಿ ಮಕ್ಕಳಿಂದ ಹಿರಿಯ ವಯಸ್ಸಿನವರಿಗೂ ಆರೋಗ್ಯ ಸಮಸ್ಯೆ ಆಧುನಿಕ ಯುಗದಲ್ಲಿ ಕಂಡು ಬಂದಿದ್ದು, ಸಿರಿಧಾನ್ಯ ಉತ್ಪನ್ನಗಳ ಆಹಾರ ಪ್ರಸ್ತುತ ಪೀಳಿಗೆಯ ಜನರು ಸೇವಿಸಬೇಕೆಂದು ಸಲಹೆ ನೀಡಿದರು. ಡಾ. ವಾಸುದೇವ ನಾಯ್ಕ್, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೆವಿಕೆ, ರದ್ದೇವಾಡೆಗಿರವರು ಮಾತನಾಡಿ 2023 ಸಿರಿಧಾನ್ಯ ವರ್ಷವನ್ನು ವಿವಿಧ ರೀತಿಯಲ್ಲಿ ಆಚರಿಸಿದ ಮುನ್ನೋಟ ಕುರಿತು ಮಾತನಾಡಿದರು.

ಡಾ. ಎಸ್.ಬಿ. ಗೌಡಪ್ಪ, ವಿಸ್ತರಣಾ ನಿರ್ದೇಶಕರು, ಕೃ.ವಿ.ವಿ, ರಾಯಚೂರುರವರು ತಮ್ಮ ಆಧ್ಯಕ್ಷಿಯ ಭಾಷಣದಲ್ಲಿ ಮಾತನಾಡಿ ಸಿರಿಧಾನ್ಯದ ಉತ್ಪನ್ನ, ಮೌಲ್ಯವರ್ಧನೆ, ಉಪಯೋಗ, ಔಷಧೀಯ ಗುಣಗಳ ಮಾಹಿತಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ತನ್ನ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಯಗಳಲ್ಲೂ ಸಿರಿಧಾನ್ಯದ ಕುರಿತು ವಿವಿಧ ವಿಸ್ತರಣ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಪ್ರಧಾನ ಮಂತ್ರಿರವರ ತನ್ನ ಮನಧಾಳದ ಮಾತು ರೇಡಿಯೋ ಸಂದೇಶದಲ್ಲಿ ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಎಪ್.ಪಿ.ಓಗಳು ಉತ್ತಮ ಕಾರ್ಯನಿರ್ವಹಿಸಿರುದು ಇಡೀ ದೇಶ ಹೆಮ್ಮ ಪಡುವಂತಹ ವಿಷಯ ಎಂದು ತಿಳಿಸಿದರು.

ಡಾ. ಸಂಗಪ್ಪಾ, ವಿಜ್ಞಾನಿಗಳು (ಕೃಷಿ ವಿಸ್ತರಣೆ) ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಹೈದ್ರಾಬಾದ್ ಇವರ ಪ್ರಾಸ್ತಾವಿಕ ನುಡಿಯಲ್ಲಿ ಸಿರಿಧಾನ್ಯ ಬೆಳೆದು ಬಂದ ರೀತಿ ಎಫ್.ಪಿ.ಓ ಗಳ ಸ್ಥಾಪನೆ ಮೌಲ್ಯವರ್ಧನ ಚಟುವಟಿಕೆಗಳು ಹಾಗೂ ವಾಣಿಜ್ಯ ದೃಷ್ಟಿಯಲ್ಲಿ ಸಿರಿಧಾನ್ಯ ಮುಂದಿನ ರೂಪುರೇಷಗಳು ಕುರಿತು ಮಾಹಿತಿ ನೀಡಿದರು.

ಡಾ. ರಾಜು ಜಿ. ತೆಗ್ಗೆಳ್ಳಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕವಿಕೆ, ಕಲಬುರಗಿ ರವರು ಸ್ವಾಗತಿಸಿದರು. ಡಾ. ಪಂಡಿತ್ ರಾಠೋಡ, ಡಾ. ಅಂಬರೇಷ ಗಣಚಾರ್ಯ, ಕು. ರಕ್ಷಿತಾ,  ಗೋಪಾಲ ಕುಲಕರ್ಣಿ,  ಮಲ್ಲಿನಾಥ ಹೇಮಾಡಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಿರಿಧಾನ್ಯ ಬೇಸಾಯ, ಸಿರಿಧಾನ್ಯ ಮೌಲ್ಯವರ್ಧನೆ, ರೈತ ಉತ್ಪಾದಕಾ ಗುಂಪುಗಳ ಮಹತ್ವ, ಕೃಷಿ ಕ್ಷೇತ್ರದಲ್ಲಿ ಬ್ಯಾಂಕಿನ ಪಾತ್ರ, ರಾಸಾಯನಿಕ ಮುಕ್ತ, ಸಿರಿಧಾನ್ಯ ಪುಸ್ತಕಗಳ ಕುರಿತು ಮಾಹಿತಿ ನೀಡಿದರು.

ಡಾ. ಯುಸುಫ್‍ಅಲಿ ಅ. ನಿಂಬರಗಿ, ಡಾ. ಜಹೀರ್ ಅಹೆಮದ್, ಡಾ. ಶ್ರಿನಿವಾಸ ಬಿ.ವಿ, ಮತಿ ಫರ್ಜಾನಾ,  ಸಿದ್ರಾಮಪ್ಪಾ ಮಣಿಗೆ,  ನಾಗಿಂದ್ರ ಬಡದಾಳಿ, ಶಶಿಕÀಲಾ ಮೂಲಗೆ,  ನಾಗಣ್ಣಾ,  ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಕೃಷಿ ಮಹಾವಿದ್ಯಾಲಯ, ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಗ್ರಾಮದ ಬಂದ ರೈತರು ಸಿರಿಧಾನ್ಯ ಕಾರ್ಯಗಾರದಲ್ಲಿ ಹಾಜರಾಗಿದ್ದರು. ವಿವಿಧ ಸಿರಿಧಾನ್ಯ ಉತ್ಪನ್ನದ ಮಳಿಗೆಗಳು, ಯಂತ್ರೋಪಕರಣಗಳು, ಸಾವಯವ ಕೃಷಿ ಪುಸ್ತಕ, ಸಾವಯವ ಕುಸುಬೆ ಎಣ್ಣೆ ಮಳಿಗೆಗಳು ಕಾರ್ಯಗಾರದ ಪಕ್ಕ ಸ್ಥಾಪಿಸಲಾಗಿತ್ತು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420