ಡಾಂಬರೀಕರಣ ಕಾಮಗಾರಿ ಕಳೆಪೆ : ಕರವೇ ದೂರು

ಯಾದಗಿರಿ : ಅಚ್ಚೋಲಾ ತಾಂಡಾದಿಂದ ಅರಕೇರಾ (ಬಿ) ತಾಂಡಾದವರೆಗೆ ೨೦೧೮-೧೯ ನೇ ಸಾಲಿನ ಹೆಚ್.ಕೆ.ಆರ್.ಡಿ.ಬಿ. ಯೋಜನೆಯಡಿ ಡಾಂಬರೀಕರಣ ಕಾಮಗಾರಿ ಸಂಪೂರ್ಣ ಕಳಪೆ ಆಗಿದ್ದು, ಗುತ್ತಿಗೆದಾರರಿಗೆ ನೀಡುವ ಕಾಮಗಾರಿ ಬಿಲ್ ತಡೆಹಿಡಿಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಹೆಚ್‌ಕೆಆರ್‌ಡಿಬಿ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ದೂರು ಸಲ್ಲಿಸಿದರು.

ಡಾಂಬರೀಕರಣ ಕಾಮಗಾರಿಗೆ ರೂ ೮೩.೦೩ ಲಕ್ಷ ಮಂಜೂರಿಯಾಗಿದ್ದು, ಸದರಿ ಕಾಮಗಾರಿ ಅಂದಾಜು ಪತ್ರಿಕೆಯಂತೆ ಆಳ, ಅಗಲ ಅಗೆಯದೇ, ಕಳಪೆ ಮಟ್ಟದ ಸಾಮಾಗ್ರಿಗಳು ಬಳಸಿದ್ದು, ಕಾಮಗಾರಿ ಮಾಡಿದ ಕೆಲವೇ ದಿನಗಳಲ್ಲಿ ಡಾಂಬರ್ ಕಿತ್ತುಕೊಂಡು ಹೋಗಿದೆ, ಗುತ್ತಿಗೆದಾರರು & ಅಧಿಕಾರಿಗಳು ಶಾಮೀಲಾಗಿ ಬೇಕಾಬಿಟ್ಟಿಯಾಗಿ ಕಾಮಗಾರಿ ನಿರ್ಮಾಣ ಮಾಡಲಾಗಿದೆ ಎಂದು ದೂರಿದರು.

ಸರ್ಕಾರವೂ ಸಾರ್ವಜನಿಕರ ಅನುಕೂಲಕ್ಕಾಗಿ ಅನುದಾನ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಹಣದ ಆಸೆಗಾಗಿ ಕಳಪೆ ಪ್ರಮಾಣದಲ್ಲಿ ರಸ್ತೆ ನಿರ್ಮಾಣ ಮಾಡಿದ್ದು, ಈಗಾಗಲೇ ಬಿಲ್ ಮಾಡಲಾಗಿದ್ದು, ಅದನ್ನು ವಾಪಾಸ್ ಸರ್ಕಾರಕ್ಕೆ ಭರಿಸಲು ಆದೇಶಿಸಬೇಕು ಹಾಗೂ ೩ನೇ ತನಿಖಾ ತಂಡದವರಾದ ಎಂ.ಎ.ಆರ್.ಎಸ್. ಪ್ಲಾನಿಂಗ್ & ಇಂಜಿನಿಯರಿಂಗ್ ಸರ್ವಿಸ್ ಪ್ರೈ ಲಿ. ತಪ್ಪು ವರದಿ ನೀಡಿದ್ದು, ಸದರಿ ಏಜೆನ್ಸಿ ಮೇಲೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸದರಿ ಕಾಮಗಾರಿಯ ಬಿಲ್ ತಡೆಹಿಡಿದು ಉನ್ನತ ಮಟ್ಟದ ಅಧಿಕಾರಿಗಳ ತನಿಖಾ ತಂಡದಿಂದ ತನಿಖೆ ನಡೆಸಿ, ಗುಣಮಟ್ಟ ಪರೀಕ್ಷಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು, ಪುನಾ: ಡಾಂಬರೀಕರಣ ಹಾಕಿ ಕಾಮಗಾರಿ ಮಾಡಲು ಕ್ರಮ ಕೈಗೊಳ್ಳಬೇಕು ವಿಳಂಭವಾದರೆ ತಮ್ಮ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಜಿಲ್ಲಾ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ಹಣಮಂತ ನಾಯಕ ಖಾನಳ್ಳಿ, ಅರ್ಜುನ ಪವಾರ್ ಬಸವಂತಪೂರ, ವೆಂಕಟೇಶ ರಾಠೋಡ, ವಿಶ್ವರಾಧ್ಯ ದಿಮ್ಮೆ, ಮಲ್ಲು ದೇವಕರ್, ಭೀಮು ಬಸವಂತಪೂರ ಸಿದ್ದಪ್ಪ ಕ್ಯಾಸಪನಳ್ಳಿ, ರಿಯಾಜ್ ಪಟೇಲ್ ಉಳ್ಳೆಸೂಗೂರು ಇತರರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420