SBI ಬ್ಯಾಂಕ್ ಕಚೇರಿ ಎದುರು ಕಲಬುರಗಿ ಯುವ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ: ಚುನಾವಣಾ ಇಲೆಕ್ಟ್ರಾಲ್ ಬಾಂಡ್ ವಿವರ ನೀಡುವಳಿ ಹಿಂದೆಟ್ಟು ಹಾಕಿ, ಸಾರ್ವಜನಿಕರ ಹಣವನ್ನು ಪಕ್ಷದ ಪರವಾಗಿ ಖರ್ಚು ಮಾಡಲು ಸಹಕರಿಸುತ್ತಿರುವ SBI ಬ್ಯಾಂಕ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಸರ್ವೊಚ್ಛ ನ್ಯಾಯಾಲಯ ಆದೇಶ ಮಾಡಿದರೂ ಎಸ್‍ಬಿಐ ಬಾಂಡ್‍ಗಳನ್ನು ಬ್ಯಾಂಕ್ ಗ್ರಾಹಕರಿಗೆ ವಿತರಣೆ ಮಾಡದೇ ಸರಕಾರದಂತೆ ಏಕ ನಿರ್ಣಯ ನಡೆಸುತ್ತಿರುವದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಾನಂದ ಆರ್. ಹೊನಗುಂಟಿ ಅವರ ನೇತೃತ್ವದಲ್ಲಿ ನಗರದ ಎಸ್‍ಬಿಐ ಬ್ಯಾಂಕ್ ಎದುರುಗಡೆ ಪ್ರತಿಭಟನೆ ನಡೆಸುವ ಮೂಲಕ ಎಸ್‍ಬಿಐ ಬ್ಯಾಂಕ್ ಯಾರ ಅಡಿಯಲ್ಲಿ ಕೆಲಸ ಮಾಡುತ್ತಿದೆ ? ಇದು ಪ್ರಧಾನಿ ನರೇಂದ್ರ ಮೋದಿ ಇವರ ಕೈಗೊಂಬೆಯಾಗಿದೆಯಾ ? ಸ್ವೀಸ್ ಬ್ಯಾಂಕ್ ದಾಖಲೆ ಬಹಿರಂಗ ಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರಕಾರದ ಪ್ರಧಾನಿ ನರೇಂದ್ರ ಮೋದಿ ಈಗ ಎಸ್‍ಬಿಐ ದಾಖಲೆ ಬಹಿರಂಗಪಡಿಸಲು ಗಡಗಡ ನಡುಗುತ್ತಿದ್ದಾರೆ ಏಕೆ ? ಸುಪ್ರೀಂ ಕೋರ್ಟ ಆದೇಶ ಪಾಲಿಸದೇ ಇರುವ ಎಸ್‍ಬಿಐ ಬ್ಯಾಂಕ್‍ಗೆ ಧಿಕ್ಕಾರ ಎಂದು ಅವರು ಪ್ರತಿಭಟನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ಬಿಜೆಪಿ ಸರಕಾರವನ್ನು ಹೋನಗುಂಟಿಯವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಧ್ಯಕ್ಷ ಈರಣ್ಣ ಝಳಕಿ, ಯುವ ಮುಖಂಡರಾದ ಗೌತಮ್ ಕರಿಕಲ್, ಪರಶುರಾಮ್ ನಾಟಿಕಾರ್, ಶಕೀಲ ಸರಡಗಿ, ಅಶೋಕ ಕಪನೂರ, ಅಮರ ಶಿರವಾಳ, ಉಲ್ಲಾಸ್ ಪಾಟೀಲ್, ಸೈಯದ್ ರಕಿಬ್, ಟೈಗರ್ ವಿಗ್ನೇಶ್, ಸಂಘಪಾಲ್, ಗಣೇಶ್ ನಾಗನಳ್ಳಿ, ಶೇಖ ಸಮರಿನ್, ಸಂಪೂರ್ಣ, ರಾಮ ಪ್ರಸಾದ್ ಕಾಂಬಳೆ, ಚಂದ್ರು ನೆಲ್ಲೂರ್, ರಮೇಶ ಹಡಪದ, ಸಂಜಯ ಇದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420