ಕಲಬುರಗಿ: ಮತದಾನ ಪವಿತ್ರ ಕರ್ತವ್ಯವಾಗಿದ್ದು ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಪದವಿ ಪೂರ್ವ ಮೊದಲನೆಯ ವರ್ಷದ ವಿದ್ಯಾರ್ಥಿಗಳಿಗೆ ತಿಳಿಸಿದರು.
ಅವರು ಮಂಗಳವಾರಂದು ಸರ್ವಜ್ಞ ಪದವಿ ಪೂರ್ವ ಕಾಲೇಜ್ನಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನದ ಹಕ್ಕು ಹೊಂದಿದ್ದಾರೆ.ಫಾರಂ.ನ೬ ಪಡೆದು ಅರ್ಜಿಸಲ್ಲಿಸಬೇಕು ಅದಕ್ಕೆ ವಾಸಸ್ಥಳ ಹಾಗೂ ಇನ್ನಿತರ ದಾಖಲೆಗಳು ಹಚ್ಚಿ ಬಿ.ಎಲ್.ಓ ಗೆ ನೀಡಿದರೆ. ವೋಟರ್ ಐಡಿ ಕಾರ್ಡ್ ಸಿಗುತ್ತದೆ. ತಾವುಗಳ ಮತದಾನ ಮಾಡಬಹುದು ಎಂದರು.
ಈಗಾಗಲೇ ಲೋಕಸಭಾ ಚುನಾವಣೆ ಬರುತ್ತಿದ್ದು, ಮತದಾನ ಮಾಡಲು ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದರು.
ಲೋಕಸಭಾ ಚುನಾವಣೆಗೆ ಹೆಚ್ಚಿನ ಪ್ರತಿಶತ ಬರಬೇಕಾದರೆ ತಾವೆಲ್ಲರೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದರು.
ಈಗಾಗಲೇ ನಾವು ಕೆಲವೊಂದು ಜಾಥಾ ಕಾರ್ಯಕ್ರಮಗಳು ಮಾಡುತ್ತಿದ್ದೇವೆ ತಾವುಗಳು ಯಾರೆ ೧೮ ವರ್ಷಗಳಾದರೆ ನೀವು ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕೆಂದರು.
ಚುನಾವಣೆ ದಿನದಂದು ಎಲ್ಲರಿಗೂ ರಜೆ ಸಿಗುತ್ತದೆ ಎಷ್ಟು ಜನರು ಮತದಾನ ಮಾಡುವುದನ್ನು ಬಿಟ್ಟು ಊರುಗಳಿಗೆ ಹೋಗುತ್ತಾರೆ ಅದನ್ನು ಬಿಟ್ಟು ಮತದಾನ ಮಾಡಬೇಕೆಂದರು ತಿಳಿಸಿದರು.
ಮತದಾನ ಮಾಡುವಾಗ ತಮ್ಮ ಹೆಸರುಗಳು ಚಿನ್ನೆಗಳನ್ನು ಗುರುತಿಸಿ ಮತದಾನ ಮಾಡಬೇಕು ಯಾವುದೇ ಗೊಂದಲ ಒಳಗಾಗಬಾರದು ಎಂದರು.
ಅದೇ ರೀತಿಯಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಪಾಟೀಲ ಭುವನೇಶ ದೇವಿದಾಸ ಮಾತನಾಡಿ,
ಪ್ರಜಾಪ್ರಭುತ್ವದ ಏಳಿಗಾಗಿ ನಾವೆಲ್ಲರೂ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕೆಂದರು. ತಮ್ಮ ಹೆಸರನ್ನು ಫಾರಂ ನಂ.೬ ರಡಿಯಲ್ಲಿ ನೋಂದಾಯಿಸಬೇಕು. ಯಾವುದೇ ಮತದಾರರ ಚುನಾವಣೆಯಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.
ಸ್ವೀಪ್ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗವಹಿಸಿದ್ದೀರಿ ನನಗೆ ಸಂತೋಷ ತಂದಿದೆ ಚುನಾವಣೆಗೆ ಸಂಬಂಧಿಸಿದ ಪ್ರತಿಯೊಂದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಸಂಯೋಜನಾಧಿಕಾರಿ ವಿರೇಂದ್ರ ಕುಮಾರ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ವಜ್ಞ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಚನ್ನಾರೆಡಿ ಅವರು ಸ್ವಾಗತಿಸಿದರು.
ಜೇವರ್ಗಿ ಸರಕಾರಿ ಪದವಿ ಪೂರ್ವ ಕಾಲೇಜ್ ಬಸವರಾಜ ಪ್ರಾಂಶುಪಾಲ ಜಿಲ್ಲಾ ಪಂಚಾಯತ ವ್ಯವಸ್ಥಾಪಕ ಮಲ್ಲಿಕಾರ್ಜುನ, ಸೇರಿದಂತೆ ಸರ್ವಜ್ಞ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳು ಸ್ವೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…