ಹೆಗ್ಗಣದೊಡ್ಡಿ ಪಿಡಿಓ ಅಮಾನತು ದಲಿತ ಸೇನಾ ಹೋರಾಟಕ್ಕೆ ಜಯ

0
7

ಸುರಪುರ: ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿಯನ್ನು ದಲಿತ ಸೇನೆ ಹೋರಾಟದ ಮನಿಗೆ ಸ್ಪಂಧಿಸಿ ಅಮಾನತುಗೊಳಿಸಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ದಲಿತ ಸೇನೆ ತಾಲೂಕು ಅಧ್ಯಕ್ಷ ಮರಿಲಿಂಗ ಗುಡಿಮನಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಹೆಗ್ಗಣದೊಡ್ಡಿ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಸರಿಯಾಗಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ ಹಾಗೂ ಸರಕಾರದ ಅನೇಕ ಯೋಜನೆಗಳಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ನಮ್ಮ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ ಅವರ ನೇತೃತ್ವದಲ್ಲಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.

Contact Your\'s Advertisement; 9902492681

ಅದರಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಮ್ಮ ಮನವಿಗೆ ಸ್ಪಂಧಿಸಿ ಅವರನ್ನು ಅಮಾನತು ಮಾಡಿದ್ದಾರೆ,ಅದಕ್ಕಾಗಿ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಮತ್ತು ತಾಲೂಕು ಪಂಚಾಯತಿ ಇಓ ಅವರಿಗೆ ಧನ್ಯವಾದವನ್ನು ಸಲ್ಲಿಸುತ್ತೇವೆ. ಅಲ್ಲದೆ ಪಿಡಿಓ ಅವರ ವಿರುದ್ಧದ ಎಲ್ಲಾ ಆರೋಪಗಳ ಕುರಿತು ಸರಿಯಾಗಿ ತನಿಖೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಮನವಿ ಮಾಡುವುದಾಗಿ ಮರಿಲಿಂಗ ಗುಡಿಮನಿ ಹುಣಸಿಹೊಳೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here