ಕಲಬುರಗಿ: ಕಲಬುರಗಿ ಲೋಕಸಭೆ ಚುನಾವಣೆಗೆ ಈ ಬಾರಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು ಖರ್ಗೆ ಸೇರಿ ಯಾರೇ ನಿಂತರು ಕಾಂಗ್ರೆಸ್ ಸೋಲುವುದು ಖಚಿತ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 2019 ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಲಿಕಯ್ಯ ಗುತ್ತೇದಾರ ಬಾಬುರಾವು ಚಿಂಚನಸೂರ್ ಅವರ ಹವಾದಿಂದ ಮಲ್ಲಿಕಾರ್ಜುನ ಖರ್ಗೆ ಸೋತ್ತಿದ್ದರು. ಆದರೆ ಈ ಬಾರಿ ಪ್ರಧಾನಿ ಮೋದಿ ಅವರ ಹವಾ ಕಲಬುರಗಿಯಲ್ಲಿದೆ ಕಾಂಗ್ರೆಸ್ ಸೋಲುವುದು ಖಚಿತವಾಗಿದೆ ಎಂದು ಭವಿಷ್ಯ ನುಡಿದರು.
ಪ್ರಧಾನಿ ಮೋದಿ ಅವರು ನೋಡಿದಂತೆ ಸಿಎಎ ಜಾರಿಗೆ ತಂದಿದ್ದಾರೆ ಇದು ನಮ್ಮ ಪಕ್ಷಕ್ಕೆ ಅನುಕೂಲ ಆಗಲಿದೆ. ಪ್ರಧಾನಿ ಮೋದಿ ಅವರ ಉಧಾರೋತ್ವದಿಂದ ಕಲಬುರಗಿ ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಈ ಭಾಗದ ಬಹುದಿನಗಳ ಬೇಡಿಕೆಗಳು ಈಡೇರಿಕೆ ಆಗಿವೆ ಎಂದರು.
ಪಕ್ಷದ ಸಂಸದರೊಬ್ಬರು ಸಂವಿಧಾನದ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ವಿಚಾರ ಅದಕ್ಕೆ ಪಕ್ಷ ಹೇಳಿಕೆಯಲ್ಲ. ಈ ಹಿಂದೆಯು ಅವರು ಸಾಕಷ್ಟು ಗೊಂದಲ ಸೃಷ್ಟಿಸಿದರು ಅದಕ್ಕೆ ಅವರಿಗೆ ಪಕ್ಷದಿಂದ ನೋಟಿಸ್ ಸಹ ನೀಡಲಾಗಿತ್ತು. ಅವರಿಗೆ ಲೋಕಸಭೆ ಟಿಕೆಟ್ ನೀಡುವ ವಿಚಾರ ಪಕ್ಷದಲ್ಲಿ ತೀರ್ಮಾನ ಕೈಗೊಳಲಾಗುತ್ತದೆ ಎಂದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…