ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರೈತರ ಪಹಣಿಗೆ ಅಧಾರ್ ಕಾರ್ಡ್ ಸೀಡಿಂಗ್ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಕಲಬುರಗಿ ಜಿಲ್ಲೆಯ 8 ಜನ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಲ್ಯಾಪಟಾಪ್ ವಿತರಣೆ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗಾಇದ್ಲಾಯಿ ಪಂಚಾಯತಿಯ ಸುಮಾ, ಜೇವರ್ಗಿ ತಾಲೂಕಿನ ಅಂಕಲಗಾ ಪಂಚಾಯತಿಯ ಶರಣು ನಾಟೆಕರ್, ಸೇಡಂ ತಾಲೂಕಿನ ಮೇದಕ ಪಂಚಾಯತಿಯ ಗೋಪಾಲರೆಡ್ಡಿ,ಅಫಜಲಪೂರ ತಾಲೂಕಿನ ಭೈರಾಮಡಗಿ ಪಂಚಾಯತಿಯ ಮಲ್ಲಿನಾಥ, ಕಮಲಾಪುರ ತಾಲೂಕಿನ ವಿ.ಕೆ.ಸಲಗರ್ ಪಂಚಾಯತಿಯ ಮಿಲಿಂದ ಕಾಂಬ್ಳೆ, ಕಾಳಗಿ ತಾಲೂಕಿನ ಹಲಚೇರಾ ಪಂಚಾಯತಿಯ ಬಸವರಾಜ, ಆಳಂದ ತಾಲೂಕಿನ ದರ್ಗಾಶಿರೂರ ಪಂಚಾಯತಿಯ ಭೀಮಾಶಂಕರ ಹಾಗೂ ಚಿತ್ತಾಪೂರ ತಾಲೂಕಿನ ಸನ್ನತ್ತಿ ಪಂಚಾಯತಿಯ ಮೈಮುನಾ ತಸ್ಲೀಮ್ ಅವರಿಗೆ ಸಚಿವರು ಹೆಚ್.ಪಿ. ಕಂಪನಿಯ ಲ್ಯಾಪಟಾಪ್ ನೀಡಿ ಇನ್ನು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಶುಭ ಕೋರಿದರು.
ಕಂದಾಯ ಇಲಾಖೆ ಡಿಜಿಟಲೀಕರಣ ಮಾಡಲಾಗುತ್ತಿದೆ. ಇ-ಕಚೇರಿ ಅನುಷ್ಟಾನಗೊಳಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪಟಾಪ್ ವಿತರಣೆ ಮಾಡಲಾಗುವುದು ಎಂದು ಕಳೆದ ಬಾರಿ ಕಲಬುರಗಿ ಜಿಲ್ಲೆ ಪ್ರವಾಸ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅದರಂತೆ 2024-25ನೇ ಆಯವ್ಯಯದಲ್ಲಿಯೂ ಇದನ್ನು ಘೋಷಿಸಲಾಗಿತ್ತು.
ಇದೀಗ ಮೊದಲನೇ ಹಂತವಾಗಿ ರಾಜ್ಯದ 10 ಜಿಲ್ಲೆಗಳ ಆಯ್ದ ಉತ್ತಮ ಪ್ರಗತಿ ಸಾಧಿಸಿದ ಗ್ರಾಮ ಅಡಳಿತಾಧಿಕಾರಿಗಳಿಗೆ ಲ್ಯಾಪಟಾಪ್ ವಿತರಿಸಿದ್ದು, ಮುಂದಿನ ಒಂದು ವರ್ಷದಲ್ಲಿ ಉಳಿದ ಜಿಲ್ಲೆಯಲ್ಲಿ ಉತ್ತಮ ಸೇವೆಗೈದವರಿಗೆ ಲ್ಯಾಪಟಾಪ್ ನೀಡಲಾಗುವುದೆಂದು ಸಚಿವ ಕೃಷ್ಣ ಬೈರೇಗೌಡ ಅವರು ಕಾರ್ಯಕ್ರಮದಲ್ಲಿ ಘೋಷಿಸಿದರು.
ಲ್ಯಾಪಟಾಪ್ ಪಡೆದಿದಕ್ಕೆ ಸಂತಸ: ಪ್ರಸಕ್ತ ಸರ್ಕಾರ ಕಂದಾಯ ಇಲಾಖೆಯನ್ನು ಕಾಗದು ರಹಿತ ಕಚೇರಿಯನ್ನಾಗಿ ಪರಿವರ್ತಿಸುತ್ತಿದೆ. ತಹಶೀಲ್ದಾರ ಕಚೇರಿಯಲ್ಲಿರುವ ಲಿಪಿಕ ಸಿಬ್ಬಂದಿಗಳಿಗೆ ನೀಡಿರುವ ಕಂಪ್ಯೂಟರ್ ಗಳನ್ನೇ ನಾವು ಬಳಸುತ್ತಿರುವುದರಿಂದ ಕಚೇರಿ ಕೆಲಸಕ್ಕೆ ಅಡಚಣೆಯಾಗುತ್ತಿತ್ತು. ಇದೀಗ ತಮಗೆ ಪ್ರತ್ಯೇಕವಾಗಿ ಲ್ಯಾಪಟಾಪ್ ನೀಡಿದ್ದರಿಂದ ನಾವು ಕ್ಷೇತ್ರದಲ್ಲಿದ್ದಿಕೊಂಡೆ ಕೆಲಸ ಸಲೀಸಾಗಿ ನಿರ್ವಹಿಸಬಹುದಾಗಿದೆ. ಸರ್ಕಾರ ಲ್ಯಾಪಟಾಪ್ ನೀಡಿದ್ದು ತುಂಬಾ ಅನುಕೂಲವಾಗಲಿದೆ ಎಂದು ಲ್ಯಾಪಟಾಪ್ ಪಡೆದ ನೌಕರರು ಸಂತಸ ಹಂಚಿಕೊಂಡರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…