ಮಾ.17 ರಂದು `ಕಥಾ ಕಮ್ಮಟ-2024’: ಕಮ್ಮಟದ ಮಾಹಿತಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ತೇಗಲತಿಪ್ಪಿ

ಕಲಬುರಗಿ: ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಶೋಧಿಸಿ ಅವರಿಗೆ ಕಥೆ, ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ಕೊಡುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಮಾರ್ಚ್ 17 ರಂದು ಬೆಳಗ್ಗೆ 10.30 ಕ್ಕೆ ಒಂದು ದಿನದ `ಕಥಾ ಕಮ್ಮಟ’ವನ್ನು ಅಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಮ್ಮಟದ ವಿವರ ನೀಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ದಿನಕ್ಕೊಂದು ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಸಹೃದಯರ ಹೃದಯ ಗೆದ್ದಿದೆ. ಕಥೆ ರಚನೆಯ ಕುರಿತು ಇಡೀ ದಿನ ನಡೆಯುವ ಈ ಕಮ್ಮಟದಲ್ಲಿ ಚಿಂತನ-ಮಂಥನ ನಡೆಸಲಾಗುವುದು. ಇಂದು ಸಾಹಿತ್ಯ ಕ್ಷೇತ್ರದಿಂದ ದೂರ ಇರುವ ಯುವ ಸಮೂಹವನ್ನು ಸೆಳೆಯಲು ಇಂಥ ಕಮ್ಮಟಗಳು ಪೂರಕವಾಗಬಹುದು ಎಂಬ ಆಶಾಭಾವನೆ ಹೊಂದಲಾಗಿದೆ. ಜತೆಗೆ ಹೊಸ ಕಥೆಗಾರರ ಸೃಷ್ಠಿಗೆ ಕಾರಣವಾಗಲಿದೆ.

ಕಥೆ ಹೇಳುವುದು ಹೊಸತಲ್ಲ, ಪ್ರತಿಯೊಬ್ಬರಲ್ಲಿಯೂ ಕಥೆಗಳು ಹುಟ್ಟುತ್ತಿರುತ್ತವೆ. ನಮ್ಮ ಬದುಕಿನ ಸಂವಹನಕ್ಕೆ ಕಥೆಗಳು ಬಹಳ ಹತ್ತಿರ. ಮನಸ್ಸಿನಲ್ಲಿ ಹುಟ್ಟಿಕೊಳ್ಳುವ ಕಥೆಗಳಿಗೆ ವಸ್ತು ವಿಷಯಕ್ಕೆ ಆಕಾರ ರೂಪ ಕೊಟ್ಟು, ತಂತ್ರಗಾರಿಕೆಯಿಂದ ಹೆಣೆಯುವ ಕೌಶಲ್ಯ ಬೆಳೆಸುವುದು ಈ ಕಥಾ ಕಮ್ಮಟದ ಮೂಲ ಉದ್ದೇಶವಾಗಿದೆ ಎಂದು ವಿವರಿಸಿದರು.

ಹಿರಿಯ ಕಥೆಗಾರ ಸಿದ್ಧರಾಮ ಹೊನ್ಕಲ್ ಅವರು ಕಮ್ಮಟವನ್ನು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಶರಣಪ್ಪ ಸೈದಾಪೂರ,. ಪಿಡಿಓ ರಾಜೇಶ್ವರಿ ಸಾಹುವಾಡಿ, ಶಿಕ್ಷಣ ಇಲಾಖೆಯ ವಿ.ಎಂ. ಪತ್ತಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇಡೀ ದಿನ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಕಥಾ ಸಾಹಿತ್ಯದ ತತ್ವ-ಸತ್ವ-ಮಹತ್ವ ಎಂಬ ವಿಷಯದ ಕುರಿತು ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅವರು ಮಾತನಾಡಲಿದ್ದು, ಪ್ರೊ. ನೀಲಕಂಠ ಕಣ್ಣಿ, ಎಂ.ಬಿ.ನಿಂಗಪ್ಪ, ಧರ್ಮರಾಯ ಜವಳಿ, ಸಿದ್ಧರಾಮ ಸಿ ಸರಸಂಬಿ ಉಪಸ್ಥಿತರಿರುವರು.
ಕಥಾ ಸಾಹಿತ್ಯದಲ್ಲಿ ಶೈಲಿ-ತಂತ್ರ ಕುರಿತು ಹಿರಿಯ ಕಥೆಗಾರ ಡಾ. ಕೆ.ಎಸ್. ನಾಯಕ ಮಾತನಾಡಲಿದ್ದು, ಈರಯ್ಯಾ ಹಿರೇಮಠ, ಬಿ.ಜಿ.ಪಾಟೀಲ, ಸಂಜೀವಕುಮಾರ ಡೊಂಗರಗಾಂವ ಉಪಸ್ಥಿತರಿರುವರು.

ಕಥಾ ಸಾಹಿತ್ಯದ ಸ್ವರೂಪ-ವಸ್ತು-ಭಾಷೆ ಕುರಿತು ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ ಮಾತನಾಡಲಿದ್ದು, ಸಚೀನಕುಮಾರ ಮಣೂರೆ, ಸಂಜೀವ ಟಿ. ಮಾಲೆ, ಸಂತೋಷ ಪಾಟೀಲ ಉಪಸ್ಥಿತರಿರುವರು.

ಕಥಾ ಸೃಷ್ಠಿಗೆ ಬೇಕಾದುದೇನು? ವಿಷಯದ ಕುರಿತು ಕಥೆಗಾರ್ತಿ ಕಾವ್ಯಶ್ರೀ ಮಹಾಗಾಂವಕರ್ ಮಾತನಾಡಲಿದ್ದು, ಡಾ. ರಾಜಶೇಖರ ಮಾಂಗ್, ಚನ್ನಮಲ್ಲಯ್ಯ ಹಿರೇಮಠ, ಭಾಗ್ಯಲತಾ ಶಾಸ್ತ್ರೀ ಉಪಸ್ಥಿತರಿರುವರು.

ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಳಗಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಶಿವಶರಣಪ್ಪ ಮೋತಕಪಳ್ಳಿ, ಚಿಂತಕ ಡಾ. ರಾಘವೇಂದ್ರ ಚಿಂಚನಸೂರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಮ್ಮಟಕ್ಕೆ ಮೊದಲು ನೋಂದಣಿ ಮಾಡುವ ಕೇವಲ 30 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ನೋಂದಣಿ ಉಚಿತವಾಗಿ ಇದ್ದು, ಕಮ್ಮಟದಲ್ಲಿ ಭಾಗವಹಿಸಲಿಚ್ಛಿಸುವವರು ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮೊ. 98803 49025 ಗೆ ಸಂಪರ್ಕಿಸಲು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಮ್ಮಟದ ಸಂಚಾಲಕ ಧರ್ಮಣ್ಣ ಎಚ್ ಧನ್ನಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ, ಕಲ್ಯಾಣಕುಮಾರ ಶೀಲವಂತ, ಬಾಬುರಾವ ಪಾಟೀಲ, ಸೋಮಶೇಖರಯ್ಯ ಹೊಸಮಠ ಇತರರಿದ್ದರು.

ಇಂದಿನ ಆಧುನಿಕ ಜಗತ್ತಿನಲ್ಲಿ ಮೊಬೈಲ್‍ಗಾಗಿ ಹೆಚ್ಚು ಸಮಯವನ್ನು ಮೀಸಲಾಗಿಡುವ ಪರಿಪಾಠ ಬೆಳೆದಿದೆ. ಸಾಹಿತ್ಯ, ಸಾಂಸ್ಕøತಿಕ ವಿಚಾರಗಳ ಬಗ್ಗೆ ಹೆಚ್ಚು ಸಮಯ ಮೀಸಲಿಡುವುದರಿಂದ ಹೆಚ್ಚು ಪ್ರಯೋಜನವಿದೆ ಎಂಬುದನ್ನು ಪರಿಷತ್ತು ನಿರಂತರ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸಾಬೀತುಪಡಿಸಲಾಗುತ್ತಿದೆ. – ವಿಜಯಕುಮಾರ ತೇಗಲತಿಪ್ಪಿ- ಕಸಾಪ ಜಿಲ್ಲಾಧ್ಯಕ್ಷ

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420