ಸೇಡಂನಲ್ಲಿ 16 ರಂದು ಮೂರು ಕವನ ಸಂಕಲನ ಬಿಡುಗಡೆ

ಸೇಡಂ: ಮಹಾದೇವಿ ಎಸ್. ಮೆಮೋರಿಯಲ್ ಪಬ್ಲಿಕ್ ಸ್ಕೂಲ್ ಮತ್ತು ನೃಪತುಂಗ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ಮಾ.16 ರಂದು ಬೆಳಿಗ್ಗೆ 10.15 ಕ್ಕೆ ಮೂರು ಕವನ ಸಂಕಲನಗಳ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶ್ರೀಶೈಲಕುಮಾರ ಮಠಪತಿ ಮತ್ತು ಜಗದೀಶ ಕಡಬಗಾಂವ ತಿಳಿಸಿದ್ದಾರೆ.

ಸೇಡಂ ತಾಲೂಕಿನ ಯಡಗಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಪ್ರಮೀಳಾ ಪಾಟೀಲ ಎಸ್.ಬಿಬ್ಬಳ್ಳಿ ಅವರು ರಚಿಸಿದ `ಅರಳಿದ ಮೊಗ್ಗು’ ಮತ್ತು `ಬೆಳದಿಂಗಳು’ ಹಾಗೂ ಶಾಲಾ ಮಕ್ಕಳಿಂದ ಬರೆದ ಕವನಗಳ ಸಂಕಲನವನ್ನು ಸಂಪಾದನೆ ಮಾಡಿದ `ಚಿಣ್ಣರ ಚಿಲಿಪಿಲಿ’ ಕೃತಿಗಳನ್ನು ಹಿರಿಯ ಸಾಹಿತಿಗಳಾದ ಡಾ.ಸ್ವಾಮಿರಾವ ಕುಲಕರ್ಣಿ ಬಿಡುಗಡೆ ಮಾಡುವರು.

ಪೂಜ್ಯರಾದ ಶ್ರೀ ಶಿವಶಂಕರ ಶಿವಾಚಾರ್ಯರು, ಶ್ರೀ ಪಂಚಾಕ್ಷರ ಮಹಾಸ್ವಾಮಿಗಳು ಮತ್ತು ಶ್ರೀ ಸದಾಶಿವ ಸ್ವಾಮಿಗಳು ಸಾನಿಧ್ಯ ವಹಿಸುವರು. ಈ ಸಮಾರಂಭವನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಿಸುವರು. ಸರಕಾರಿ ನಿವೃತ್ತ ನೌಕರ ಸಂಘದ ಅಧ್ಯಕ್ಷ ಶಿವಯ್ಯ ಸ್ವಾಮಿ ಬಿಬ್ಬಳ್ಳಿ ಅಧ್ಯಕ್ಷತೆ ವಹಿಸುವರು.

ಅರಳಿದ ಮೊಗ್ಗು ಮತ್ತು ಚಿಣ್ಣರ ಚಿಲಿಪಿಲಿ ಕೃತಿಗಳ ಕುರಿತು ನೃಪತುಂಗ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರಭಾಕರ ಜೋಶಿ ಹಾಗೂ ಬೆಳದಿಂಗಳು ಕೃತಿ ಕುರಿತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಮಾತನಾಡುವರು.

ಸೇಡಂ ಬಿಇಓ ಮಾರುತಿ ಹುಜರತಿ, ಸರಕಾರಿ ನೌಕರ ಗೃಹ ನಿರ್ಮಾಣ ಮಂಡಳಿ ಜಿಲ್ಲಾಧ್ಯಕ್ಷ ನಾಗಪ್ಪ ಹೊನ್ನಳ್ಳಿ, ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಲೇಖಕಿ ಡಾ.ಸುಜಾತಾ ಜಂಗಮಶೆಟ್ಟಿ, ಸ್ಕೌಟ್ಸ್ ಮತ್ತು ಗೈಡ್ಸನ ಕಲ್ಯಾಣ ಕರ್ನಾಟಕ ಉಸ್ತುವಾರಿ ಮಲ್ಲೇಶ್ವರಿ ಜೂಜಾರೆ ದಾವಣಗೆರೆ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಹೂಗಾರ, ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಅಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ, ಕಸಾಪ ತಾಲೂಕು ಅಧ್ಯಕ್ಷೆ ಸುಮಾ ಎಲ್.ಚಿಮ್ಮನಚೋಡ್ಕರ್, ಸರಕಾರಿ ನೌಕರ ಸಂಘದ ಅಧ್ಯಕ್ಷ ಶಿವಶಂಕ್ರಯ್ಯ ಇಮಡಾಪುರ, ಸರಕಾರಿ ಪ್ರೌಢಶಾಲೆ ಮುಖ್ಯಗುರುಗಳ ಸಂಘದ ಅಧ್ಯಕ್ಷ ಅಶೋಕರೆಡ್ಡಿ ಚಿಲುಮೆ, ಸರಕಾರಿ ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಅನೀಲ ಸುಬೇದಾರ, ಯಡಗಾ ಸರಕಾರಿ ಪ್ರೌಢಶಾಲೆ ಮುಖ್ಯಗುರು ಚನ್ನಬಸರೆಡ್ಡಿ ಕಿಷ್ಟಾಪುರ, ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಸಾಗರ ಮುಖ್ಯ ಅತಿಥಿಗಳಾಗಿರುವರು ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420