ಕೃಷಿ ಸಖಿಯರಿಗೆ ನೈಸಿರ್ಗಕ ಕೃಷಿ ತರಬೇತಿ

ಕಲಬುರಗಿ: ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ,1, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಾಹಣಾ ಸಂಸ್ಥೆ, ಹೈದ್ರಾಬಾದ ಹಾಗೂ ಸಂಜೀವಿನ ಸಂಸ್ಥೆ, ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಆವರಣದಲ್ಲಿ ಕೃಷಿ ಸಖಿಯರಿಗಾಗಿ 5 ದಿನಗಳ ನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮವನ್ನು ಡಾ. ಎಸ್.ಬಿ. ಗೌಡಪ್ಪ, ವಿಸ್ತರಣಾ ನಿರ್ದೇಶಕರು, ಕೃ.ವಿ.ವಿ, ರಾಯಚೂರುರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕೃಷಿ ಸಖಿಯರು ವಿಜ್ಞಾನಿಗಳು ಮತ್ತು ರೈತರ ನಡುವೆ ನೂತನ ತಂತ್ರಜ್ಞಾನಗಳನ್ನು ತಲುಪಿಸಲು ಸೇತುವೆಯಾಗಿ ಕಾರ್ಯನಿರ್ವಹಿಸಬೇಕೆಂದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಡಾ. ಸಿದ್ರಾಮಪ್ಪಾ ಪಾಟೀಲ್, ಧಂಗಾಪೂರ, ಅಧ್ಯಕ್ಷರು, ಕೃಷಿಕ ಸಮಾಜ, ಕಲಬುರಗಿ ಜಿಲ್ಲೆ ರವರು ಮಾತನಾಡಿ ಬದಲಾದ ಪರಿಸ್ಥಿತಿಯಲ್ಲಿ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದು, ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಂತ್ರಜ್ಞಾನಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಿದ್ದಲ್ಲಿ ಕೃಷಿಯನ್ನು ಲಾಭದಾಯಕವಾಗಿ ಮಾಡಬಹುದೆಂದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ ಕೇಂದ್ರದ ಮುಖ್ಯಸ್ಥರಾದ ಡಾ. ರಾಜು ಜಿ.ತೆಗ್ಗೆಳ್ಳಿರವರು ಮಾತನಾಡಿ ಕೃಷಿ ಸಖಿಯರಿಗೆ ಕ್ಷೇತ್ರದಲ್ಲಿ ಎದುರಾಗುವ ಹಲವು ರೈತರ ಸಮಸ್ಯೆಗಳಿಗೆ ಪರಿಹರಿಸಲು ಕೆವಿಕೆಯ ವಿಜ್ಞಾನಿಗಳು ಸದಾ ಜೊತೆಯಲ್ಲಿರುತ್ತಾರೆ ಭರವಸೆ ನೀಡಿದರು.

ಕಾರ್ಯಕ್ರಮದ ಸಂಯೋಜಕರಾದ ಡಾ. ಶ್ರೀನಿವಾಸ ಬಿ.ವಿ ರವರು ಮಾತನಾಡಿ ರೈತರು ತಮ್ಮ ಜಮೀನಿನ ಮಣ್ಣು ಮತ್ತು ನೀರು ಪರೀಕ್ಷಿಸಿ ಫಲವತ್ತತೆ ಆಧಾರದ ಮೇಲೆ ಸ್ಥಳೀಯ ಪದ್ದತಿಗಳನ್ನು ಅರ್ಥೈಸಿಕೊಂಡು ನೈಸಿರ್ಗಿಕ ಕೃಷಿಯನ್ನಾಗಿ ಪರಿವರ್ತಿಸಿದರೆ ಕ್ರಮೇಣ ರಾಸಾಯನಿಕ ಪರಿಕರಗಳ ಬಳಕೆ ಕಡಿಮೆ ಮಾಡುವುದರ ಮೂಲಕ ಮಣ್ಣಿನ ಆರೋಗ್ಯ ಕಾಪಾಡುವುದರ ಜೊತೆಗೆ ಕಡಿಮೆ ವೆಚ್ಚದಲ್ಲಿ ಕೃಷಿ ಕೈಗೊಂಡು ಆರೋಗ್ಯಯುತ ಸಮಾಜ ನಿರ್ಮಿಸಬಹುದೆಂದರು.

ಕಾರ್ಯಕ್ರಮದಲ್ಲಿ ಡಾ. ಎಂ.ಎಂ. ಧನೋಜಿ, ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಡಾ. ಸಂಗಪ್ಪಾ, ವಿಜ್ಞಾನಿಗಳು (ಕೃಷಿ ವಿಸ್ತರಣೆ) ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಹೈದ್ರಾಬಾದ್, ಡಾ. ರಾಚಪ್ಪಾ ಹಾವೇರಿ, ಡಾ. ವಾಸುದೇವ ನಾಯ್ಕ್, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೆವಿಕೆ, ರದ್ದೇವಾಡೆಗಿ ಡಾ. ಹನುಮಂತ ನಾಯ್ಕ್, ನಾಗಿಂದ್ರ ಬಡದಾಳಿ , ಮಹೇಶ ಹುಗಾರ ಹಾಗೂ 30 ಕೃಷಿ ಸಖಿಯರು ಭಾಗವಹಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420