ಬಿಸಿ ಬಿಸಿ ಸುದ್ದಿ

ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ಕಲಬುರಗಿ ವಿಮಾನ ನಿಲ್ದಾಣದ ಪ್ರದೇಶ ಹಸ್ತಾಂತರ

ಕಲಬುರಗಿ: ರಾಜ್ಯ ಸರ್ಕಾರವೇ ಸಂಪೂರ್ಣವಾಗಿ 175.57 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಹಾರಾಟ ಪ್ರಾರಂಭಿಸುವ ಸಂಬಂಧ ವಿಮಾನ ನಿಲ್ದಾಣದ ಒಟ್ಟು 742-23 ಎಕರೆ ಪ್ರದೇಶವನ್ನು ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರು ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್ ಮತ್ತು ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ ಹಂಚಿಕೆ ಪತ್ರ ನೀಡಿದರು.

ಕಲಬುರಗಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೆಐಎಡಿಬಿ ಧಾರವಾಡ ಇವರು 567-10 ಎಕರೆ, ಸಹಾಯಕ ಆಯುಕ್ತರು ಕಲಬುರಗಿ ಇವರು 127-30 ಎಕರೆ ಹಾಗೂ ತಹಶೀಲ್ದಾರರು ಕಲಬುರಗಿ ಇವರು 48-23 ಎಕರೆ ಸೇರಿದಂತೆ ಒಟ್ಟಾರೆ 742-23 ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮತ್ತು ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡುವೆ ನಡೆದ ಪರಸ್ಪರ ಒಪ್ಪಂದದಂತೆ ಇಂದು ವಿಮಾನ ನಿಲ್ದಾಣದ ಅಷ್ಟು ಪ್ರದೇಶವನ್ನು ಭೌತಿಕ ಹಂಚಿಕೆ ಪ್ರಕ್ರಿಯೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಗಿದಿರುವುದರಿಂದ ಕೂಡಲೆ ವಾಣಿಜ್ಯ ಹಾರಾಟ ಪ್ರಾರಂಭಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್ ಅವರಿಗೆ ತಿಳಿಸಿದ ಅವರು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣಪ್ಪ, ಶಿಷ್ಠಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಕಲಬುರಗಿ ತಹಶೀಲ್ದಾರ ಸಂಜೀವಕುಮಾರ ದಾಸರ್, ಶಿರಸ್ತೇದಾರ ಗಂಗಾಧರ ಇದ್ದರು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

48 mins ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

56 mins ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

1 hour ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

1 hour ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

1 hour ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

1 hour ago