ಕಲಬುರಗಿ: ಪ್ರಸಕ್ತ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಧನಸಹಾಯ ನೀಡುವಲ್ಲಿ ಒಂದನೇ ಕಂತು ಎರಡನೇ ಕಂತು ಮಾಡಿರುವುದು ಬಹಳ ಹಾಸ್ಯಾಸ್ಪದವಾಗಿದೆ,ವಿವಿಧ ಇಲಾಖೆಗಳ ಕಾಮಗಾರಿಗಳ ವಿಷಯದಲ್ಲಿ ಒಂದನೇ ಕಂತು ಎರಡನೇ ಕಂತು ಅಂತ ಕೇಳಿದ್ದೆವು ಆದರೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಸಂಘ ಸಂಸ್ಥೆಗಳಿಗೆ, ಕಲಾವಿದರಿಗೆ ಸರ್ಕಾರ ಅನುದಾನ ನೀಡುವಲ್ಲಿ ಒಂದನೇ ಕಂತು ಎರಡನೇ ಕಂತು ಹಣ ಬಿಡುಗಡೆ ಮಾಡುತ್ತಿರುವುದು ನಿಜವಾಗಿಯೂ ಬೇಸರದ ಸಂಗತಿ ಆಗಿದೆ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಗದ್ದುಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಕೋ ಬಿಟ್ಟಿ ಯೋಜನೆಗಳನ್ನು ಸರ್ಕಾರ ಹಾಕಿಕೊಂಡಿದ್ದು, ಕನ್ನಡ ಸಾಹಿತ್ಯ ಸಂಗೀತ ಸಂಸ್ಕೃತಿ ಪರಂಪರೆಗಳನ್ನು ಉಳಿಸುವ ಸಲುವಾಗಿ ನಡೆಸುವ ಕಾರ್ಯಕ್ರಮಗಳಿಗೆ ಕನಿಷ್ಠ ಮೊತ್ತದಲ್ಲಿರುವ ಧನಸಹಾಯ ಕ್ಕೆ, ಕಂತುಗಳು ಮಾಡಿರುವುದು ನಿಜವಾಗಲೂ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವಾರು ವರ್ಷಗಳಿಂದ ಸತತವಾಗಿ ಕಾರ್ಯಕ್ರಮಗಳು ಮಾಡುತ್ತಾ ಬಂದಿರುವ ಸಂಸ್ಥೆಗಳಿಗೂ ಅನುದಾನದಲ್ಲಿಯೇ ಕಡಿಮೆ ಮಂಜೂರು ಮಾಡಿ ಅದರಲ್ಲಿಯೇ ಒಂದನೇ ಎರಡನೇ ಕಂತು ಮಾಡಿರುವುದು ಅಸಹ್ಯ ವಾಗಿ ಕಾಣುತ್ತದೆ ಇದರ ಬಗ್ಗೆ ಇಲಾಖೆ ಸಚಿವರು ಮುಖ್ಯಮಂತ್ರಿಗಳು ಅಧಿಕಾರಿಗಳು ವಿಚಾರ ಮಾಡಿ ಕೂಡಲೇ ಹಣ ಮಂಜೂರು ಮಾಡಿ ಇನ್ನು ಹೆಚ್ಚಿನ ಧನಸಾಯವನ್ನು ಸಂಘ ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕೆಂದು ಗದ್ದುಗೆ ಆಗ್ರಹಿಸಿದ್ದಾರೆ.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…