ಕಲಬುರಗಿ: ಜಾನಪದವನ್ನು ವೈಜ್ಞಾನಿಕ ನೆಲೆಯಲ್ಲಿ ಚಿಂತನೆ ನಡೆಸಿದ ಮೊದಲಿಗರು ಎಂದರೆ ಡಾ.ಹಿ.ಶಿ. ರಾಮಚಂದ್ರೇಗೌಡರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತು ಹಾಗೂ ಶ್ರೀಮತಿ ಪಿಲ್ಲೂ ಹೋಮಿ ಇರಾಣಿ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ನಡೆದ ಜಾನಪದ ಸರಣಿ ಕಾರ್ಯಕ್ರಮದಲ್ಲಿ ಜಾನಪದ ತಜ್ಞರಾದ ಡಾ.ಹಿ.ಶಿ.ರಾ. ಅವರ ಬದುಕು – ಬರಹ ಕುರಿತು ಉಪನ್ಯಾಸ ನೀಡಿದ ಅವರು, ದೇಶಿ-ವಿದೇಶಿ ಚಿಂತನೆಯನ್ನು ಸ್ಥಳೀಯ ವಿದ್ಯಮಾನಗಳ ಜೊತೆಗೆ ಲೇಪಿಸಿ ಜಾನಪದವನ್ನು ವ್ಯಾಖ್ಯಾನಿಸುವ ಜ್ಞಾನಿಯಾಗಿದ್ದಾರೆ ಎಂದು ಹೇಳಿದರು.
ಹೊಸತನ್ನು ಅರಿಯುವ ಹಿನ್ನೆಲೆಯಲ್ಲಿ ನಮ್ಮ ಕಾಲಘಟ್ಟದ ಸಂವೇದನೆಗಳ ಜೀವಪರ ಪ್ರತಿಪಾದಕರಾಗಿದ್ದು, ಜಾನಪದ ಉಳಿಸುವ ನಿಟ್ಟಿನಲ್ಲಿ 25 ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು ಸಾಧನೆಗೆ ಹಿಡಿದ ಕನ್ನಡಿ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಪ್ರಾಧ್ಯಾಪಕಿ ಡಾ.ಸುಜಾತಾ ಜಂಗಮಶೆಟ್ಟಿ ಮಹಿಳಾ ದಿನದ ಹಿನ್ನೆಲೆಯಲ್ಲಿ ಮಾತನಾಡಿದರು.
ನಿವೃತ್ತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಮುಖ್ಯ ಅತಿಥಿಯಾಗಿದ್ದರು. ಲಿಂಗರಾಜ ಸಿರಗಾಪುರ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ ಎಂ.ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಎಸ್.ಮಾಲಿಪಾಟೀಲ ಪ್ರಾಸ್ತಾವಿಕ ಮಾತನಾಡಿದರು.
ಉಪನ್ಯಾಸಕಿ ಡಾ.ಸವಿತಾ ಸಿರಗೋಜಿ ಸ್ವಾಗತಿಸಿದರು. ವಿದ್ಯಾರ್ಥಿನಿ ಕು.ನಿಖಿತಾ ವಂದಿಸಿದರು. ಕು.ಮಹಾಲಕ್ಷ್ಮಿ ಪಾಟೀಲ ಪ್ರಾರ್ಥನಾ ಗೀತೆ ಹಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಸದಸ್ಯ ಭೀಮಣ್ಣ ಬೋನಾಳ, ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ, ಶಿವಾನಂದ ಮಠಪತಿ, ಶಿವಕುಮಾರ ಪಾಟೀಲ ಕನಗನಹಳ್ಳಿ, ಸೋಮಶೇಖರ ನಂದಿಧ್ವಜ, ಅಮರಪ್ರಿಯ ಹಿರೇಮಠ ಇತರರಿದ್ದರು.
ಮಹಿಳೆಯರು ಪುರುಷರಷ್ಟೇ ಸಮಾನಳು. ಯಾವುದಕ್ಕೂ ಹೆದರಬೇಕಿಲ್ಲ. ಸಮ ಸಮಾಜ ನಿರ್ಮಾಣಕ್ಕೆ ಶರಣರು ಕಲ್ಪಿಸಿಕೊಟ್ಟಿದ್ದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. – ಡಾ.ಸುಜಾತಾ ಜಂಗಮಶೆಟ್ಟಿ, ಕನ್ನಡ ಪ್ರಾಧ್ಯಾಪಕರು
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…