ಬಿಸಿ ಬಿಸಿ ಸುದ್ದಿ

ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ಜಯಕರ್ನಾಟಕ ಹೋರಾಟ

ಸುರಪುರ: ಹೆಸರಿಗೆ ಸರಕಾರಿ ಆಸ್ಪತ್ರೆಯಿದ್ದು ಇಲ್ಲಿ ಯಾವುದೆ ಸರಿಯಾದ ವ್ಯವಸ್ಥೆಯಿಲ್ಲದೆ ರೋಗಿಗಳು ಪರದಾಡುವಂತಾಗಿದೆ ಎಂದು ಜಯಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರವಿ ಕುಮಾರ ನಾಯಕ ಬೈರಿಮಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ತಾಲ್ಲೂಕು ಆಸ್ಪತ್ರೆ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಆಸ್ಪತ್ರೆಯಲ್ಲಿ ಐಸಿಯು ಘಟಕವಿದ್ದು ಸಿಬ್ಬಂದಿ ಇಲ್ಲದೆ ಇದುವರೆಗೆ ಆರಂಭಿಸಿಲ್ಲ.ಡಯಾಲಿಸಿಸ್ ಘಟಕವಿದ್ದು ಸರಿಯಾದ ಮೂಲಭೂತ ಸೌಲಭ್ಯಗಳಿಲ್ಲದೆ ಉಪಯೋಗವಿಲ್ಲದಂತಾಗಿದೆ.ಕುಡಿಯುವ ನೀರಿನ ಸಮಸ್ಯೆ ಇದೆ,ಪ್ರಸೂತಿ ತಜ್ಞರು ಇಲ್ಲದಿರುವುದರಿಂದ ಹೆರಿಗೆಗೆ ತೊಂದರೆಯಾಗಿದೆ,ಸರಿಯಾದ ವೈದ್ಯರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.ಚುಚ್ಚುಮದ್ದು ವಿಭಾಗದಲ್ಲಿ ಸರಿಯಾದ ವ್ಯವಸ್ಥೆಯಿಲ್ಲ,ಅಲ್ಲದೆ ಸಿಬ್ಬಂದಿ ಕೊರತೆಯಿಂದಾಗಿ ಮಹಿಳೆಯರು ಮತ್ತು ಪುರುಷರನ್ನು ಒಂದೆಡೆಯಲ್ಲಿಯೆ ಚುಚ್ಚುಮದ್ದು ಹಾಕಾಳಗುತ್ತಿದೆ.ಪ್ರತ್ಯೇಕ ಕೋಣೆಗಳನ್ನು ತೆರೆಯಬೇಕು.ಆಸ್ಪತ್ರೆಯಲ್ಲಿನ ಶೌಚಾಲಯಗಳಲ್ಲಿ ಸ್ವಚ್ಛತೆಯಿಲ್ಲದೆ ದುರ್ನಾತ ಬೀರುತ್ತಿದೆ.ಆಸ್ಪತ್ರೆಯ ಮೇಲೆಯೆ ಮೊಬೈಲ್ ಟವರ್ ಹಾಕಿರುವುದರಿಂದ ರೋಗಿಗಳಿಗೆ ಮತ್ತು ಮಕ್ಕಳ ಮೇಲೆ ಗಂಬೀರ ಪರಿಣಾಮ ಬೀರುತ್ತಿದೆ.ಕೂಡಲೆ ಟವರ್ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ನಂತರ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬರೆದ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಮಲ್ಲಪ್ಪ ಕಬಾಡಗೇರಾ,ಶರಣಪ್ಪ ಬೈರಿಮರಡಿ,ರಾಮಕೃಷ್ಣ ಕಲ್ಲೋಡಿ, ಯಲ್ಲಪ್ಪ ನಾಯಕ, ಚಂದ್ರು ನಾಯಕ,ದೇವು ನಾಯಕ,ಯಲ್ಲಪ್ಪ ಕಲ್ಲೋಡಿ,ಬಸವರಾಜ ಕವಡಿಮಟ್ಟಿ,ಬಸವರಾಜ ಪಾಟೀಲ,ಯಲ್ಲಪ್ಪ ಶಿಬಾರಬಂಡಿ,ಮೌನೇಶ ದಳಪತಿ,ರವಿಕಿರಣ ಹೊಸ ಸಿದ್ದಾಪುರ ರಾಘವೇಂದ್ರ ಗೋಗಿಕೇರಾ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

8 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

14 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

14 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago