ಮನರೇಗಾ ಸಮರ್ಪಕ ಜಾರಿಗೆ ಆಗ್ರಹಿಸಿ ಡಾ. ಜಾಧವ್ ಕಚೇರಿ ಮುಂದೆ ಧರಣಿ

ಕಲಬುರಗಿ: ಮನರೇಗಾ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಸದ ಡಾ. ಉಮೇಶ್ ಜಾಧವ್ ಅವರ ಕಚೇರಿ ಮುಂದೆ ಗುರುವಾರ ವಿವಿಧ ರೈತ, ಕೃಷಿ ಕಾರ್ಮಿಕ ಹಾಗೂ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಅಹೋರಾತ್ರಿ ಧರಣಿ ಆರಂಭಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಡಾ. ಮೀನಾಕ್ಷಿ ಬಾಳಿ, ಶ್ರೀಮತಿ ಕೆ. ನೀಲಾ, ಭೀಮಶೆಟ್ಟಿ ಯಂಪಳ್ಳಿ, ಡಾ. ಸಾಯಬಣ್ಣಾ ಗುಡುಬಾ, ಪದ್ಮಿಣಿ ಕಿರಣಗಿ, ಚಂದಮ್ಮ ಗೋಳಾ, ಮಲ್ಲಮ್ಮ ಕೋಡ್ಲಿ, ಸಿದ್ದು ಹರವಾಳ್, ಜಿ. ಪರಮೇಶ್ವರ್ ಕಾಂತಾ, ಸುಭಾಷ್ ಜೇವರ್ಗಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯು ಕಾಯ್ದೆಯಾಗಿದ್ದು, ಯುಪಿ1 ಸರ್ಕಾರವಿದ್ದಾಗ ಎಡಪಕ್ಷಗಳ ಶರತ್ತಿನಿಂದಾಗಿ ಕಾಯ್ದೆ ಜಾರಿಯಾಗಿತ್ತು. ಕಾಯ್ದೆ ಜಾರಿಯಲ್ಲಿ ಇಂದಿಗೂ ಅನೇಕ ಸಮಸ್ಯೆಗಳು ಆಗುತ್ತಿವೆ. ಕಾಯ್ದೆಯ ಉಳಿವಿಗಾಗಿ ಸರ್ಕಾರ ಶ್ರಮಿಸದೇ ಮೂಲೆಗೆ ತಳ್ಳಲು ಬೇಕಾದ ನಿಯಮಗಳನ್ನು ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಉದ್ಯೋಗ ಖಾತ್ರಿಯಡಿ ಮಾಡಿದ ಕೆಲಸಕ್ಕೆ ಕೂಲಿ ಪಾವತಿಯಾಗುತ್ತಿಲ್ಲ. ಅದಕ್ಕೆ ರಾಜಕೀಯ ಸೇಡಿನ ಸಂಚು ಕಾರಣವಾಗಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲಿಲ್ಲ ಎಂಬ ಕಾರಣಕ್ಕೆ ಅಕ್ಕಿಯನ್ನು ಕೊಡಲು ಹೇಗೆ ನಿರಾಕರಣೆ ಮಾಡಲಾಯಿತೋ ಹಾಗೆ ಮನರೇಗಾ ಬಾಕಿಯನ್ನು ಪಾವತಿಸಲು ಕೇಂದ್ರ ಸರ್ಕಾರವು ಸೇಡಿನ ರಾಜಕಾರಣ ಮಾಡುತ್ತಿದೆ. ಇದರಿಂದ ಸಾಮಾನ್ಯ ಜನತೆ ಬಲಿಯಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕಾರ್ಮಿಕರಿಗೆ ಅನೇಕ ಜೀವ ಹಾನಿಗಳು ಸಂಭವಿಸುತ್ತಿವೆ. ಜಿಲ್ಲೆಯ ಕಮಲಾಪುರ ತಾಲ್ಲೂಕಿನ ವಿಕೆ ಸಲಗರ್ ಗ್ರಾಮದ ಚನ್ನಪ್ಪ ಎಂಬ ವ್ಯಕ್ತಿಯ ಸಾವಾಗಿದೆ. ಕೇಂದ್ರ ಸರ್ಕಾರವು ಅನಾವಶ್ಯಕವಾಗಿ ತಂದಿರುವ ಎನ್‍ಎಂಎಂಎಸ್ ಪದ್ದತಿಯು ಕಾರ್ಮಿಕರಿಗೆ ಮಾರಕವಾಗಿದೆ. ಕಲ್ಯಾಣ ಕರ್ನಾಟಕವು ಉರಿಬಿಸಿಲಿನಿಂದ ಕೂಡಿದೆ. ತಾಂತ್ರಿಕ ಕಾರಣವೊಡ್ಡಿ ಕೆಲಸಗಳ ಸ್ಥಳಕ್ಕೆ ಬೆಳಿಗ್ಗೆ ಬರುವ ಕಾರ್ಮಿಕರನ್ನು ಮಧ್ಯಾಹ್ನದಿಂದ ಸಂಜೆಯವರೆಗೂ ಕಾಯಬೇಕು. ಮನೆಯಿಂದ ಕೆಲಸದ ಸ್ಥಳಕ್ಕೆ ಬರುವುದು, ಫೋಟೋಕ್ಕಾಗಿ ಕಾಯುವುದು, ಕೆಲಸ ಮಾಡಿದ ಮೇಲೂ ಮತ್ತೆ ತಾಸುಗಂಟಲೇ ಫೋಟೋಕ್ಕಾಗಿ ಕಾಯುವುದು ಹೀಗೆ ಕನಿಷ್ಠ ಏಳರಿಂದ ಎಂಟು ತಾಸು ಕಾರ್ಮಿಕರಿಗೆ ಹೊರೆಯಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕೆಲಸದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕುಡಿದು ಬೀಸಾಡಿದ ಬಿಸಿಲರಿ ನೀರಿನ ಬಾಟಲಿಗಳನ್ನು ಮರುಬಳಕೆ ಮಾಡುವ ಒತ್ತಡಕ್ಕೆ ಕಾರ್ಮಿಕರು ಒಳಗಾಗಿದ್ದಾರೆ. ಬಿಸಿಲಲ್ಲಿ ಏಳೆಂಟು ತಾಸು ಕೆಲಸ ಮಾಡುವುದರಿಂದ ಬೆವರು, ಶಕ್ತಿ ಹೋಗಿ ರಕ್ತದೊತ್ತಡದಲ್ಲಿ ಏರುಪೇರಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇಷ್ಟೆಲ್ಲ ಕಷ್ಟಪಟ್ಟು ದುಡಿದರೆ ಕೇವಲ 316ರೂ.ಗಳು ಮಾತ್ರ. ಪ್ರತಿ ದಿನ ಕೆಲಸ ಮಾಡಲು ಬಳಸುವ ಸಲಕರಣೆಗಳನ್ನು ಶಾರ್ಫನ್ ಮಾಡಲು ಹತ್ತು ರೂ.ಗಳನ್ನು ಕೊಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅದನ್ನೂ ಕಡಿತ ಮಾಡಲಾಗಿದೆ. ಬಜೆಟ್‍ನಲ್ಲಿ ಶೇಕಡಾ 35ಕ್ಕಿಂತಲೂ ಹೆಚ್ಚು ಕಡಿತ ಮಾಡಿದ್ದು, ಹಂತ, ಹಂತವಾಗಿ ಉದ್ಯೋಗ ಖಾತ್ರಿಯನ್ನು ಕೇಂದ್ರ ಸರ್ಕಾರವು ಮುಗಿಸುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

ಕೂಡಲೇ ಕೇಂದ್ರ ಸರ್ಕಾರವು ಬಾಕಿ ಉಳಿಸಿಕೊಂಡ ಎಲ್ಲ ಹಣ ಬಿಡುಗಡೆ ಮಾಡುವಂತೆ, ದುಡಿಯುವ ಮಾನವ ದಿನಗಳನ್ನು 200 ದಿನಗಳಿಗೆ ಹೆಚ್ಚಿಸುವಂತೆ, ಎನ್‍ಎಂಎಂಎಸ್ ತಾಂತ್ರಿಕ ಅಡ್ಡಿಯನ್ನು ಕೂಡಲೇ ಕೈಬಿಡುವಂತೆ, ಇಕೆವೈಸಿ ಕಡ್ಡಾಯವನ್ನು ಕೂಡಲೇ ರದ್ದುಗೊಳಿಸುವಂತೆ, ದಿನದ ಕೂಲಿಯನ್ನು 700ರೂ.ಗಳಿಗೆ ಹೆಚ್ಚಿಸುವಂತೆ, ಮೃತ ಚನ್ನಪ್ಪ ತಂದೆ ನಾಗಪ್ಪ ಕುಟುಂಬಕ್ಕೆ ಉದ್ಯೋಗ ಖಾತ್ರಿ ಕಾಯ್ದೆ ಪ್ರಕಾರ 2 ಲಕ್ಷ ರೂ.ಗಳ ಪರಿಹಾರ ಕೊಡುವಂತೆ, ಕೆಲಸದ ಸ್ಥಳಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ, ಮಾರ್ಚ್ 31ರವರೆಗೂ ಕೆಲಸ ಬಯಸುವ ಎಲ್ಲ ಕುಟುಂಬಗಳಿಗೆ ಈಗಾಗಲೇ ಇರುವ 100 ಮಾನವ ದಿನಗಳನ್ನು ಒದಗಿಸುವಂತೆ, ಕೇವಲ 20 ಕಾಮಗಾರಿಗಳನ್ನು ಕೈಗೊಳ್ಳುವ ನಿರ್ಬಂಧತೆ ಕೈಬಿಡುವಂತೆ ಅವರು ಆಗ್ರಹಿಸಿದರು.

ಬರಗಾಲದ ಸಂದರ್ಭದಲ್ಲಿ ಕೆಲಸದ ಪ್ರಮಾಣದಲ್ಲಿ ಕಡಿತ ಮಾಡುವಂತೆ, ಮನರೇಗಾದಲ್ಲಿನ ಎಲ್ಲ ಭ್ರಷ್ಟಾಚಾರ ಕೊನೆಗೊಳಿಸುವಂತೆ, ಜನರು ಕೆಲಸ ಬಯಸಿ ಕೊಡುವ ಅರ್ಜಿಗೆ ಕಡ್ಡಾಯವಾಗಿ ಸ್ವೀಕೃತಿ ಕೊಡಬೇಕು ಎಂದು ಅವರು ಒತ್ತಾಯಿಸಿದರು

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420