ಬಿಸಿ ಬಿಸಿ ಸುದ್ದಿ

ಬೈಚಬಾಳ : ದಲಿತ ಸಂಘರ್ಷ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಸುರಪುರ: ನಗರದ ಟೇಲರ‍್ಸ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಜರುಗಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ಘರ್ಜನೆ) ಬೈಚಬಾಳ ಗ್ರಾಮ ಶಾಖೆಯ ರಚನಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಂಘಟನಾ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾದರ್ಶಗಳನ್ನು ಸಮಿತಿಯ ಕಾರ್ಯಕರ್ತರು ಅಳವಡಿಸಿಕೊಳ್ಳಬೇಕು, ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಮಾಜದಲ್ಲಿ ಎಲ್ಲರೂ ಶಿಕ್ಷಣವಂತರಾಗಲು ಶ್ರಮಿಸಬೇಕು ಎಂದು ಕರೆ ನೀಡಿದು, ದಲಿತ ಜನಾಂಗದವರ ಮೇಲೆ ಯಾವುದೇ ದೌರ್ಜನ್ಯ ದಬ್ಬಾಳಿಕೆ ಘಟನೆಗಳು ಸಂಭವಿಸಿದಲ್ಲಿ ಅದರ ವಿರುದ್ಧ ಸಂಘಟಿತರಾಗಿ ಹೋರಾಡಕ್ಕೆ ಮುಂದಾಗಬೇಕು ಎಂದು ಹೇಳಿದರು.

ತಾಲೂಕು ಸಂಚಾಲಕ ಶಿವಶಂಕರ ಹೊಸಮನಿ ಮಾತನಾಡಿ ಅಂಬೇಡ್ಕರ, ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಪುಲೆ, ನಾಲ್ವಡಿ ರಾಜಾ ಕೃಷ್ಣರಾಜ ಒಡೆಯರ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು, ತಾಲೂಕು ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ತಳವಾರಗೇರಾ ಪದಾಧಿಕಾರಿಗಳ ಪಟ್ಟಿಯನ್ನು ಓದಿದರು, ಪ್ರಮುಖರಾದ ರೈತ ಸಂಘದ ಮುಖಂಡ ಅಯ್ಯಣ್ಣ ಹಾಲಬಾವಿ, ರವಿಚಂದ್ರ ದರಬಾರಿ, ಮಲ್ಲಿಕಾರ್ಜುನ ಜಾಲಿಬೆಂಚಿ, ಮಲ್ಲು ಬೋನಾಳ, ಹುಣಸಗಿ ತಾಲೂಕು ಸಂಚಾಲಕ ಶರಣಪ್ಪ ತೆಗ್ಗಳ್ಳಿ, ಸುರೇಶ ಡೊಣ್ಣಿಗೇರಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.

ತಿಮ್ಮಣ್ಣ ದೊಡ್ಡಮನಿ (ಸಂಚಾಲಕ), ಪರಮಣ್ಣ ಬೈಚಬಾಳ, ಭೀಮಣ್ಣ ದೊಡ್ಡಮನಿ, ಮರೆಣ್ಣ ಬೋನಾಳ (ಸಂಘಟನಾ ಸಂಚಾಲಕರು) ಹಾಗೂ ಬಸವರಾಜ ಬೋನಾಳ (ಖಜಾಂಚಿ) ಆಯ್ಕೆಗೊಳಿಸಲಾಯಿತು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago