ಕುಡಿಯುವ ನೀರಿನ ಸಮಸ್ಯೆ: ಜಲ ಸಂಪನ್ಮೂಲ ಸಚಿವರಿಗೆ ಆರ್.ವಿ ನಾಯಕ ಮನವಿ

0
13

ಸುರಪುರ: ಮತಕ್ಷೇತ್ರದಲ್ಲಿ ನೀರಿನ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವುಕುಮಾರ ರವರಿಗೆ ದೂರವಾಣಿ ಮೂಲಕ ಸಂಪರ್ಕಿಸಿರುವ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ ಅವರು, ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಿರುವ ಕುರಿತು ಉಪ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದು,ತಕ್ಷಣವೇ ಸ್ಪಂದಿಸಿರುವ ಉಪ ಮುಖ್ಯಮಂತ್ರಿಗಳು ಮನವಿ ಪತ್ರವನ್ನು ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿಗಳಾದ ರಾಕೇಶ ಸಿಂಗ್ ರವರಿಗೆ ನೀಡಲು ತಿಳಿಸಿ ಸಮಸ್ಯೆಗೆ ತಕ್ಷಣವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ,ಅವರ ಸಲಹೆಯಂತೆ ಜಲ ಸಂಪನ್ಮೂಲ ಇಲಾಖೆ ಅಪರ ಕಾರ್ಯದರ್ಶಿ ರಾಕೇಶ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಗಿದೆ,ಈ ಸಂದರ್ಭದಲ್ಲಿ ಮುಖಂಡರಾದ ವೆಂಕೋಬ ಯಾದವ,ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು ಎಂದು ರಾಜಾ ವೆಣುಗೋಪಾಲ ನಾಯಕ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here