ಕಲಬುರಗಿ; ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಂದು ಪ್ರಧಾನಿ ನರೇಂದ್ರ ಮೋದಿ ಕಲಬುರಗಿ ನಗರದ ಎನ್.ವಿ ಗ್ರೌಂಡ್ ನಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಪಕ್ಷದ ನಗರ ಅಧ್ಯಕ್ಷ ಚಂದು ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ 1.5 ಲಕ್ಷ ಜನರು ಸೇರಲಿದ್ದಾರೆ ಎಂದು ತಿಳಿಸಿದ ಅವರು ಈ ಸಂದರ್ಭದಲ್ಲಿ ಯಾವುದೇ ಸರಕಾರಿ ಕಾರ್ಯಕ್ರವಲ್ಲದೇ ಕೇವಲ ಪಕ್ಷದ ಕಾರ್ಯಕರ್ತರ ಸಮಾವೇಶಕ್ಕೆ ಮೋದಿ ಅವರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಕಲ್ಯಾಣ ಕರ್ನಾಟಕ ಮತ್ತು ಕಲಬುರಗಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಪಕ್ಷದ ಹಿರಿಯರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಗುವುದೆಂದು ಈ ಸಂದರ್ಭದಲ್ಲಿ ತಿಳಿಸಿದರು.
ಸನ್ಮಾನ್ಯ ಶ್ರೀ ಚಂದು ಪಾಟೀಲ್ ಅವಿನಾಶ್ ಕುಲಕರ್ಣಿ ಶಿವಾನಂದ್ ಪಿಸ್ತಿ ವರದ ಶಂಕರ್ ಶೆಟ್ಟಿ ಅಶೋಕ್ ಮನಕರ್ ನಾಗರಾಜ್ ಮಹಾಗಕರ್ ಸೇರಿದಂತೆ ಹಲವರು ಇದ್ದರು.
ಬಿಜೆಪಿ ಪಕ್ಷ ರಾಜ್ಯದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 10 ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು ಹೊಸ ಅಭ್ಯರ್ಥಿಗಳನ್ನು ಮಣೆಹಾಕಿದೆ. ಎಐಸಿಸಿ ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆರವರ ತವರೂರುನಿಂದಲ್ಲೆ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡುವ ಮೂಲಕ ಲೋಕ ಸಮರಕ್ಕೆ ಕಲಬುರಗಿ ಸಾಕ್ಷಿಯಾಗಲಿದೆ.
ಸೋಲಿಲ್ಲದ ಸರದಾರ ಎಂದೆ ಖ್ಯಾತಿ ಪಡೆದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷ ತೊರೆದು ಅವರ ವಿರುದ್ಧವೇ ತೊಡೆತಟ್ಟಿ ನಿಂತು ಸೋಲಿಸಿದ ಡಾ. ಉಮೇಶ್ ಜಾಧವ್ ಅವರಿಗೆ ಎರಡನೇ ಬಾರಿ ತನ್ನ ಅದೃಷ್ಟ ಪರೀಕ್ಷೆ ಅವಕಾಶ ನೀಡಿದೆ.
ಅಲ್ಲದೇ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕ, ಕೇಂದ್ರ ಕಾರ್ಮಿಕ ಸಚಿವ, ಲೋಕಸಭೆ ವಿರೋಧ ಪಕ್ಷ ನಾಯಕ ಹಾಗೂ ಇದೀಗ ರಾಜ್ಯ ಸಭೆ ವಿರೋದ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ನಿಷ್ಕಳಂಕ ಆಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಕ್ಷೇತ್ರದಿಂದಲ್ಲೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಗೆ ಚಾಲನೆ ನೀಡುತ್ತಿರುವುದು ಈ ಬಾರಿ ಕಲಬುರಗಿ ಕ್ಷೇತ್ರ ದೇಶದ ಗಮನ ಸೇಳೆಯಲಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…