ಗುಂಜೋಟಿಯಲ್ಲಿರುವುದು ರಾಘವ ಚೈತನ್ಯರ ಸಮಾಧಿಯಲ್ಲ: ಹಿ.ಜಾ.ವೇ ನಾಗೇಂದ್ರ ಕಾಬಡೆ

ಆಳಂದ: ಉಮರ್ಗಾ ತಾಲೂಕಿನ ಗುಂಜೋಟಿಯಲ್ಲಿರುವುದು ಚೈತನ್ಯ ಪ್ರಭು ಮಹಾರಾಜರ ಸಮಾಧಿಯಾಗಿದೆ ಜನಸಾಮಾನ್ಯರು ಅವರನ್ನು ಸಾತಲಿಂಗಪ್ಪ ಮಹಾರಾಜ ಎಂದು ಕರೆಯುತ್ತಾರೆ. ಅಲ್ಲಿರುವುದು ಅದು ರಾಘವ ಚೈತನ್ಯರ ಸಮಾಧಿಯಲ್ಲ, ಆಳಂದ ದರ್ಗಾದ ಆವರಣದಲ್ಲಿರುವ ಸಮಾಧಿಯೇ ರಾಘವ ಚೈತನ್ಯರ ಸಮಾಧಿಯಾಗಿದೆ ಎನ್ನುವುದು ಆಳಂದ ಹಿಂದೂಗಳ ನಂಬಿಕೆಯಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಕಾಬಡೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾಧಿ ವಿಷಯದ ಕುರಿತು ವ್ಯಾಜ್ಯ ಈಗಾಗಲೇ ನ್ಯಾಯಾಲಯದ ಅಂಗಳದಲ್ಲಿದೆ ಅಲ್ಲದೇ ವಾದ ವಿವಾದಗಳು ಜರುಗಿ ನ್ಯಾಯಾಲಯಕ್ಕೆ ಬೇಕಾದ ದಾಖಲೆಗಳನ್ನು, ಸಾಕ್ಷಿಗಳನ್ನು ಸಲ್ಲಿಸಲಾಗಿದೆ. ಶಾಸಕ ಬಿ ಆರ್ ಪಾಟೀಲ ಒಂದು ಧರ್ಮವನ್ನು ಸಂತುಷ್ಟಗೊಳಿಸುವುದಕೋಸ್ಕರ, ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಶಿವರಾತ್ರಿಯ ದಿನ ಗುಂಜೋಟಿಗೆ ಹೋಗಿ ಅಲ್ಲಿರುವ ಸಾತಲಿಂಗಪ್ಪ ಮಹಾರಾಜರ ಸಮಾಧಿಯನ್ನು ರಾಘವ ಚೈತನ್ಯರ ಸಮಾಧಿ ಎಂದು ಸುಳ್ಳು ಹೇಳಿ ಹಿಂದೂಗಳ ಮಧ್ಯದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಅವರ ಈ ಹೇಳಿಕೆಯ ಹಿಂದೆ ರಾಜಕೀಯವಿದೆ ಎಂದು ಆರೋಪಿಸಿದ್ದಾರೆ.

ಆಳಂದದಲ್ಲಿರುವುದು ರಾಘವ ಚೈತನ್ಯರ ಸಮಾಧಿ ಅಲ್ಲ ಎಂದ ಮೇಲೆ ಶಾಸಕ ಬಿ ಆರ್ ಪಾಟೀಲರು ಚುನಾವಣೆ ಗೆದ್ದ ಮೇಲೆ ದರ್ಗಾದ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಿರುವುದು ಏತಕ್ಕೆ?. ಅವರ ಮಗ ಕೆಎಂಎಫ್ ಅಧ್ಯಕ್ಷ ಆರ್ ಕೆ ಪಾಟೀಲ 2022ರಲ್ಲಿ ಮುಸ್ಲಿಂರ ಜೊತೆ ಬಂದು ಶಿವಲಿಂಗ ಪೂಜೆಯಲ್ಲಿ ಭಾಗವಹಿಸಿರುವುದು ಯಾವ ಕಾರಣಕ್ಕೆ?. ಇದು ಬಿ ಆರ್ ಪಾಟೀಲರ ದ್ವಂದ್ವ ಮನಸ್ಸಿನ ಹಾಗೂ ಇತಿಹಾಸ ತಿರುಚುವ ಮನಸ್ಸಿನ ಪ್ರತಿಬಿಂಬವಾಗಿದೆ ಎಂದು ಆರೋಪಿಸಿದ್ದಾರೆ.

ಆಳಂದ ಶಾಸಕ ಬಿ ಆರ್ ಪಾಟೀಲ ಗುಂಜೋಟಿಯಲ್ಲಿ ವಾಸವಾಗಿರುವ ಎಡಪಂಥೀಯ ವಿಚಾರಧಾರೆಯ ಅರುಣ ರೇಣುಕೆ ಅವರನ್ನು ಕರೆದುಕೊಂಡು ಮುಕುಂದ ದೇಶಪಾಂಡೆಯವರ ಮನೆಗೆ ಹೋಗಿ ಇದು ರಾಘವ ಚೈತನ್ಯರ ಸಮಾಧಿ ಎಂದು ಸುಳ್ಳು ಹೇಳಿದ್ದಾರೆ. ವಾಸ್ತವದಲ್ಲಿ ಅರುಣ ರೇಣುಕೆಯವರ ಪತ್ನಿ ಗುಂಜೋಟಿಯಲ್ಲಿರುವ ಕೃಷ್ಣ ವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ನಾವು ಕೂಡ ಗುಂಜೋಟಿಗೆ ಭೇಟಿ ನೀಡಿ ದೇಶಪಾಂಡೆ ಕುಟುಂಬದವರ ಜೊತೆ ಗ್ರಾಮಸ್ಥರ ಮಾತನಾಡಿದ್ದೇವೆ ಅವರು ನೀಡಿರುವ ಮಾಹಿತಿಯನ್ನು ಶಾಸಕ ಬಿ ಆರ್ ಪಾಟೀಲ ಮುಚ್ಚಿಟ್ಟು ಅದಕ್ಕೆ ತದ್ವಿರುದ್ಧವಾದ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿ ಮಾಧ್ಯಮಗಳ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420