ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಆರ್ಜಿ ಆಹ್ವಾನ

0
124

ಬೆಂಗಳೂರು; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ ಎಸ್ ಪಿ) ಮೂಲಕ ಅರ್ಜಿಯನ್ನು ಮೇ 31 ರೊಳಗೆ ಸಲ್ಲಿಸುವುದು. 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Contact Your\'s Advertisement; 9902492681

2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ನೀಡಲು ಅನುಕೂಲವಾಗುವಂತೆ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಕಾರ್ಮಿಕರು https://kbocwwb.karnataka.gov.in/ ಲಿಂಕ್ ಅನ್ನು ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ Already Existing Seva Sindhu Construction Worker / E-Karmika Construction Worker ಟ್ಯಾಬ್‍ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಸಂಖ್ಯೆಯನ್ನು ಲಿಂಕ್ (ಸೀಡ್) ಮಾಡತಕ್ಕದ್ದು.

ಮಂಡಳಿಯಿಂದ ಶೈಕ್ಷಣಿಕ ಸಹಾಯವನ್ನು ಪಡೆಯಲು ಇದು ಆತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಜೂನ್ 30 ರೊಳಗಾಗಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದಾಗಿದೆ.

ಎಲ್ಲಾ ನೋಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ NPCI (National Payments Corporation of India)  ಮ್ಯಾಪಿಂಗ್ ಮಾಡಿಸತಕ್ಕದ್ದು. ಆಧಾರ್ ಸೀಡ್ ಹಾಗೂ ಎನ್‍ಪಿಸಿಐ ಮಾಡಿಸದೇ ಇರುವ ಕಾರ್ಮಿಕರಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ಕಡ್ಡಾಯವಾಗಿ ಸೀಡಿಂಗ್ ಮಾಡಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here