ಸುರಪುರ ನ.ಯೋ.ಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ ಪದಗ್ರಹಣ

ಸುರಪುರ: ಇಲ್ಲಿಯ ಸುರಪುರ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಗುತ್ತೇದಾರ ಅವರು ಶನಿವಾರದಂದು ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ತಾವು ಕುಳಿತುಕೊಳ್ಳಬೇಕಾದ ಕುರ್ಚಿಯ ಮೇಲೆ ಸುರಪುರ ಶಾಸಕರಾಗಿದ್ದ ದಿ.ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರವಿಟ್ಟು ಮಾಲಾರ್ಪಣೆಗೈದು ಪೂಜೆ ನೆರವೇರಿಸಿ ಸರಳವಾಗಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಪ್ರಕಾಶ ಗುತ್ತೇದಾರ ಅವರು ಮಾತನಾಡಿ ನೆಚ್ಚಿನ ನಾಯಕರಾಗಿದ್ದ ದಿ.ರಾಜಾ ವೆಂಕಟಪ್ಪ ನಾಯಕ ಅವರು ನನ್ನ ಮೇಲೆ ಅಪಾರ ಪ್ರೀತಿ ಹಾಗೂ ವಿಶ್ವಾಸ ಹೊಂದಿದ್ದರು ಅವರ ಬಗ್ಗೆ ನನಗೂ ಬಹಳಷ್ಟು ಅಭಿಮಾನವಿತ್ತು ಶಾಸಕರಾದ ನಂತರ ಸುರಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಸೂಚಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ಇಂದು ಅವರ ಆಶೀರ್ವಾದದಿಂದ ನನಗೆ ಈ ಹುದ್ದೆ ಸಿಕ್ಕಿದೆ ಆದರೆ ಇಂದು ಅವರು ಅಗಲಿರುವುದು ನನಗೆ ವೈಯುಕ್ತಿಕವಾಗಿ ತುಂಬಾ ದು:ಖ ತಂದಿದೆ ನನಗೆ ಈ ಹುದ್ದೆ ಬರಲು ಅವರೇ ಕಾರಣರಾಗಿರುವದರಿಂದ ಅವರ ಭಾವಚಿತ್ರವನ್ನು ಕುರ್ಚಿಯ ಮೇಲೆ ಇಟ್ಟು ಅಧಿಕಾರ ವಹಿಸಿಕೊಳ್ಳುತ್ತಿದ್ದೇನೆ ಎಂದು ಅವರನ್ನು ಸ್ಮರಿಸಿಕೊಳ್ಳುತ್ತಾ ಭಾವುಕರಾಗಿ ನುಡಿದರು. ನನ್ನ ಅಧಿಕಾರ ಅವಧಿಯಲ್ಲಿ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದುಕೊಳ್ಳುತ್ತೇನೆ ಪ್ರಾಧಿಕಾರದ ಎಲ್ಲಾ ಕಾರ್ಯಗಳು ನ್ಯಾಯಯುತವಾಗಿ ನಡೆಯಲಿದ್ದು ನಗರಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಯಾವುದೇ ಸಮಸ್ಯೆಗಳಿದ್ದಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ಸಂತೋಷ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ, ಮುಖಂಡರುಗಳಾದ ವಿಠಲ್ ಯಾದವ್, ರಾಜಾ ವಾಸುದೇವ ನಾಯಕ, ಶಾಂತಗೌಡ ಚನ್ನಪಟ್ಟಣ, ಅಬ್ದುಲ್ ಗಫಾರ ನಗನೂರಿ,ಶೇಖ ಮಹಿಬೂಬ ಒಂಟಿ, ಅಬ್ದುಲ್ ಅಲೀಂ ಗೋಗಿ, ಸೂಗುರೇಶ ವಾರದ, ನಗರಸಭೆ ಸದಸ್ಯರಾದ ನಾಸೀರ್ ಹುಸೇನ ಕುಂಡಾಲೆ, ಜುಮ್ಮಣ್ಣ ಕೆಂಗೂರಿವೆಂಕಟರೆಡ್ಡಿ ಬೋಯಿ,ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುವರ್ಣಾ ಸಿದ್ರಾಮ ಎಲಿಗಾರ,ಸತ್ಯನಾರಾಯಣ ಗುಡಗುಂಟಿ,ಯಂಕಣ್ಣ ಕಟ್ಟಿಮನಿ, ವೆಂಕಟೇಶ ಪೋತಲಕರ ಹಾಗೂ ಪ್ರಮುಖರಾದ ರಾಜಾ ಪಾಮ ನಾಯಕ ಹಾಗೂ ರಾಜಾ ಮುಕುಂದ ನಾಯಕ ಸೇರಿದಂತೆ ಅನೇಕರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಉಪಸ್ಥಿತರಿದ್ದು ಪ್ರಕಾಶ ಗುತ್ತೇದಾರ ಅವರಿಗೆ ಶುಭ ಕೋರಿದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420