ಕಲಬುರಗಿ: ಬಹುದಿನಗಳ ಬೇಡಿಕೆಯಂತೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಹುದ್ದೆ ತುಂಬಲು ಸರ್ಕಾರ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳ ನೇಮಕಾತಿ ಮಾಡಲು ಕೆಪಿಎಸ್ ಸಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಹಿತಿ ನೀಡಿದ್ದಾರೆ.
ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧನೆ ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು ಶೀಘ್ರವಾಗಿ ನಡೆಸುವಂತೆ KPSCಗೆ ಸೂಚನೆ ನೀಡಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೀಗ ರಾಜ್ಯಾದ್ಯಂತ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳ ನೇಮಕಾತಿಗೆ KPSC ಕರೆ ನೀಡಿದ್ದು ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಶುಭ ಕೋರುತ್ತೇನೆ. ಈ 247 ಹುದ್ದೆಗಳ ಪೈಕಿ 150 ಹುದ್ದೆಗಳು ಮಿಕ್ಕುಳಿದ ವೃಂದಕ್ಕೆ ಸೇರಿದ್ದರೆ, 97 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದಕ್ಕೆ ಸೇರಿವೆ. ಇದು ಕೇವಲ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದ ಯುವಜನತೆಯ ಸ್ವಾವಲಂಬನೆಯ ಹಕ್ಕಿಗಾಗಿ ಹಾಗೂ ಅವರನ್ನು ಉದ್ಯಮಶೀಲರನ್ನಾಗಿಸಲು ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…